ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

June 21, 2026
2:52 PM
ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.

ಭಾನುವಾರದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಭಕ್ತರ ಸಂಚಾರ ಗಣನೀಯವಾಗಿ ಹೆಚ್ಚಳ ಕಂಡುಬಂದಿದ್ದು, ಸಾವಿರಾರು ಭಕ್ತರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

ಧರ್ಮಸ್ಥಳ, ಕನ್ಯಾಡಿ ಹಾಗೂ ಉಜಿರೆ ಭಾಗಗಳಲ್ಲಿರುವ ಬಹುತೇಕ ವಸತಿಗೃಹಗಳು ಭಕ್ತರಿಂದ ಸಂಪೂರ್ಣ ಭರ್ತಿಯಾಗಿದ್ದವು. ಭಕ್ತರ ವಾಹನಗಳ ಸಂಖ್ಯೆ ಹೆಚ್ಚಿದ್ದರಿಂದ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ದಿನವಿಡೀ ವಾಹನ ಸಂಚಾರದ ದಟ್ಟಣೆ ಕಂಡುಬಂತು. ಕೆಲವು ಕಡೆ ನಿಧಾನಗತಿಯ ಸಂಚಾರವೂ ಉಂಟಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ನಗರದ ಹೊಟೇಲ್‌ಗಳು, ಉಪಾಹಾರ ಗೃಹಗಳು, ಹರಿಕೆಮಂಡೆ (ಮುಡಿ ಮತ್ತು ತಲೆಕೂದಲು ತೆಗೆಯುವ ಕೇಂದ್ರಗಳು), ದೇವಸ್ಥಾನದ ಸೇವಾ ಕೌಂಟರ್‌ಗಳು ಹಾಗೂ ವಸತಿಗೃಹಗಳ ಎದುರು ಭಕ್ತರ ಉದ್ದನೆಯ ಸರದಿ ಸಾಲುಗಳು ಕಂಡುಬಂದವು. ದೇವರ ದರ್ಶನ, ಅನ್ನಪ್ರಸಾದ ಸ್ವೀಕಾರ ಹಾಗೂ ಹರಕೆ ಸಲ್ಲಿಸಲು ಭಕ್ತರು ತಾಳ್ಮೆಯಿಂದ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು.

A large number of devotees visited Dharmasthala on Sunday to seek the blessings of Lord Manjunatha. Hotels, lodges, hair-offering centers, and accommodation facilities in Dharmasthala, Ujire, and Kanyadi were fully occupied, while roads witnessed heavy traffic congestion throughout the day.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!
June 21, 2026
3:51 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ
June 21, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ
June 21, 2026
3:00 PM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror