ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

June 21, 2026
2:52 PM
ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.

ಭಾನುವಾರದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಭಕ್ತರ ಸಂಚಾರ ಗಣನೀಯವಾಗಿ ಹೆಚ್ಚಳ ಕಂಡುಬಂದಿದ್ದು, ಸಾವಿರಾರು ಭಕ್ತರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

ಧರ್ಮಸ್ಥಳ, ಕನ್ಯಾಡಿ ಹಾಗೂ ಉಜಿರೆ ಭಾಗಗಳಲ್ಲಿರುವ ಬಹುತೇಕ ವಸತಿಗೃಹಗಳು ಭಕ್ತರಿಂದ ಸಂಪೂರ್ಣ ಭರ್ತಿಯಾಗಿದ್ದವು. ಭಕ್ತರ ವಾಹನಗಳ ಸಂಖ್ಯೆ ಹೆಚ್ಚಿದ್ದರಿಂದ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ದಿನವಿಡೀ ವಾಹನ ಸಂಚಾರದ ದಟ್ಟಣೆ ಕಂಡುಬಂತು. ಕೆಲವು ಕಡೆ ನಿಧಾನಗತಿಯ ಸಂಚಾರವೂ ಉಂಟಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ನಗರದ ಹೊಟೇಲ್‌ಗಳು, ಉಪಾಹಾರ ಗೃಹಗಳು, ಹರಿಕೆಮಂಡೆ (ಮುಡಿ ಮತ್ತು ತಲೆಕೂದಲು ತೆಗೆಯುವ ಕೇಂದ್ರಗಳು), ದೇವಸ್ಥಾನದ ಸೇವಾ ಕೌಂಟರ್‌ಗಳು ಹಾಗೂ ವಸತಿಗೃಹಗಳ ಎದುರು ಭಕ್ತರ ಉದ್ದನೆಯ ಸರದಿ ಸಾಲುಗಳು ಕಂಡುಬಂದವು. ದೇವರ ದರ್ಶನ, ಅನ್ನಪ್ರಸಾದ ಸ್ವೀಕಾರ ಹಾಗೂ ಹರಕೆ ಸಲ್ಲಿಸಲು ಭಕ್ತರು ತಾಳ್ಮೆಯಿಂದ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು.

A large number of devotees visited Dharmasthala on Sunday to seek the blessings of Lord Manjunatha. Hotels, lodges, hair-offering centers, and accommodation facilities in Dharmasthala, Ujire, and Kanyadi were fully occupied, while roads witnessed heavy traffic congestion throughout the day.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror