Advertisement
MIRROR FOCUS

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

Share

ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.30 ವರೆಗೆ ನಡೆಯುತ್ತವೆ. ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಇಲ್ಲಿ ನಿತ್ಯೋತ್ಸವ. 

ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ. ಧರ್ಮಸ್ಥಳದಲ್ಲಿ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.

ನ. 26 ರಿಂದ 30 ರ ವರೆಗೆ ಪ್ರೌಢಶಾಲಾ ಆವರಣದಲ್ಲಿ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿರುವ ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬುಧವಾರ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ಮತ್ತು ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

21 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago