Advertisement
MIRROR FOCUS

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

Share

ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.30 ವರೆಗೆ ನಡೆಯುತ್ತವೆ. ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಇಲ್ಲಿ ನಿತ್ಯೋತ್ಸವ. 

ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ. ಧರ್ಮಸ್ಥಳದಲ್ಲಿ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.

ನ. 26 ರಿಂದ 30 ರ ವರೆಗೆ ಪ್ರೌಢಶಾಲಾ ಆವರಣದಲ್ಲಿ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿರುವ ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬುಧವಾರ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ಮತ್ತು ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

7 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

9 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

15 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

16 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

23 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago