ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1 ರಂದು ಸಂಜೆ 6.45 ಕ್ಕೆ ಗೋಧೋಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ಮುಂದೆ ಓದಿ
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಮುಂದೆ ಓದಿ
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ ೦೮೨೫೬-೨೬೬೬೪೪, ವಾಟ್ಸಪ್ ನಂ. ೯೬೬೩೪೬೪೬೪೮, ೮೧೪೭೨೬೩೪೨೨
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…