ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1 ರಂದು ಸಂಜೆ 6.45 ಕ್ಕೆ ಗೋಧೋಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ಮುಂದೆ ಓದಿ
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಮುಂದೆ ಓದಿ
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ ೦೮೨೫೬-೨೬೬೬೪೪, ವಾಟ್ಸಪ್ ನಂ. ೯೬೬೩೪೬೪೬೪೮, ೮೧೪೭೨೬೩೪೨೨
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…