ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1 ರಂದು ಸಂಜೆ 6.45 ಕ್ಕೆ ಗೋಧೋಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ಮುಂದೆ ಓದಿ
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಮುಂದೆ ಓದಿ
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ ೦೮೨೫೬-೨೬೬೬೪೪, ವಾಟ್ಸಪ್ ನಂ. ೯೬೬೩೪೬೪೬೪೮, ೮೧೪೭೨೬೩೪೨೨
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…