ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಧರ್ಮಸ್ಥಳ ದೇಗುಲದ ವತಿಯಿಂದ ನಡೆಸಲ್ಪಡುವ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಡ, ಹಿಂದುಳಿದ ಹಾಗೂ ಕೃಷಿ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳು ಉಜಿರೆಯಲ್ಲಿ ಇರುವ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕಿದೆ. ಮೂರು ದಿನ ರತ್ನಮಾನಸದಲ್ಲಿಯೇ ಉಳಿದು ಅಲ್ಲಿನ ಪರಿಸರ, ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ.
ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಹೀಗಾಗಿ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನೀಡುವ ಶಿಕ್ಷಣ ಕ್ರಮದ ಮಾಹಿತಿಯನ್ನು ಸ್ವತಃ ಅಲ್ಲೇ ಉಳಿದು ಪಡೆದ ನಂತರ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಗೆ ಕನ್ನಡ ಮಾಧ್ಯಮಕ್ಕೆ ಸೇರಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಲ್ಲದೇ, ಆಂಗ್ಲ ಮಾಧ್ಯಮ ಮತ್ತು 9 ಅಥವಾ 10 ನೇ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ. ಜೊತೆಗೆ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗೆ 8023901791 ಅಥವಾ 94800351201, 9449244425 ಅಥವಾ 7892397525 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…