ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಧರ್ಮಸ್ಥಳ ದೇಗುಲದ ವತಿಯಿಂದ ನಡೆಸಲ್ಪಡುವ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಡ, ಹಿಂದುಳಿದ ಹಾಗೂ ಕೃಷಿ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳು ಉಜಿರೆಯಲ್ಲಿ ಇರುವ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕಿದೆ. ಮೂರು ದಿನ ರತ್ನಮಾನಸದಲ್ಲಿಯೇ ಉಳಿದು ಅಲ್ಲಿನ ಪರಿಸರ, ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ.
ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಹೀಗಾಗಿ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನೀಡುವ ಶಿಕ್ಷಣ ಕ್ರಮದ ಮಾಹಿತಿಯನ್ನು ಸ್ವತಃ ಅಲ್ಲೇ ಉಳಿದು ಪಡೆದ ನಂತರ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಗೆ ಕನ್ನಡ ಮಾಧ್ಯಮಕ್ಕೆ ಸೇರಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಲ್ಲದೇ, ಆಂಗ್ಲ ಮಾಧ್ಯಮ ಮತ್ತು 9 ಅಥವಾ 10 ನೇ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ. ಜೊತೆಗೆ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗೆ 8023901791 ಅಥವಾ 94800351201, 9449244425 ಅಥವಾ 7892397525 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…