Advertisement
ಸುದ್ದಿಗಳು

ನಿಮ್ಮ ಮಕ್ಕಳಲ್ಲಿ ಕೃಷಿ ಬಗ್ಗೆ ಆಸಕ್ತಿ ಬೆಳೆಸಬೇಕೆ…? | ಇಲ್ಲಿದೆ ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ

Share

ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಧರ್ಮಸ್ಥಳ ದೇಗುಲದ ವತಿಯಿಂದ ನಡೆಸಲ್ಪಡುವ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಡ, ಹಿಂದುಳಿದ ಹಾಗೂ ಕೃಷಿ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳು ಉಜಿರೆಯಲ್ಲಿ ಇರುವ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕಿದೆ. ಮೂರು ದಿನ ರತ್ನಮಾನಸದಲ್ಲಿಯೇ ಉಳಿದು ಅಲ್ಲಿನ ಪರಿಸರ, ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ.

ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಹೀಗಾಗಿ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನೀಡುವ ಶಿಕ್ಷಣ ಕ್ರಮದ ಮಾಹಿತಿಯನ್ನು ಸ್ವತಃ ಅಲ್ಲೇ ಉಳಿದು ಪಡೆದ ನಂತರ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಗೆ ಕನ್ನಡ ಮಾಧ್ಯಮಕ್ಕೆ ಸೇರಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಲ್ಲದೇ, ಆಂಗ್ಲ ಮಾಧ್ಯಮ ಮತ್ತು 9 ಅಥವಾ 10 ನೇ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ. ಜೊತೆಗೆ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗೆ 8023901791 ಅಥವಾ 94800351201, 9449244425 ಅಥವಾ 7892397525 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

15 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

17 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago