ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಧರ್ಮಸ್ಥಳ ದೇಗುಲದ ವತಿಯಿಂದ ನಡೆಸಲ್ಪಡುವ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಡ, ಹಿಂದುಳಿದ ಹಾಗೂ ಕೃಷಿ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳು ಉಜಿರೆಯಲ್ಲಿ ಇರುವ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕಿದೆ. ಮೂರು ದಿನ ರತ್ನಮಾನಸದಲ್ಲಿಯೇ ಉಳಿದು ಅಲ್ಲಿನ ಪರಿಸರ, ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ.
ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಹೀಗಾಗಿ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನೀಡುವ ಶಿಕ್ಷಣ ಕ್ರಮದ ಮಾಹಿತಿಯನ್ನು ಸ್ವತಃ ಅಲ್ಲೇ ಉಳಿದು ಪಡೆದ ನಂತರ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಗೆ ಕನ್ನಡ ಮಾಧ್ಯಮಕ್ಕೆ ಸೇರಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಲ್ಲದೇ, ಆಂಗ್ಲ ಮಾಧ್ಯಮ ಮತ್ತು 9 ಅಥವಾ 10 ನೇ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ. ಜೊತೆಗೆ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗೆ 8023901791 ಅಥವಾ 94800351201, 9449244425 ಅಥವಾ 7892397525 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…