ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಶಿವಪಂಚಾಕ್ಷರಿ ಪಠಣ ಆರಂಭ |

February 18, 2023
10:26 PM

ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು  ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ.  ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿಎಲ್ಲರೂ ಶ್ರದ್ಧಾ ಭಕ್ತಿಯಿಂದದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು  ಹೇಳಿದರು.

ಅಹೋ ರಾತ್ರಿ ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ಸೀಯಾಳ ಅಭಿಷೇಕ, ಶತರುದ್ರಾಭಿಷೇಕ ಸೇವೆ ಸಲ್ಲಿಸಲಿದ್ದಾರೆ.
ದೇವಸ್ಥಾನ ಆವರಣದಲ್ಲಿ ಭಕ್ತರು ಶಿವಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಧ್ಯಾನದಲ್ಲಿ ತೊಡಗಿದ್ದಾರೆ.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಮಾಣಿಲ ಮೋಹನದಾಸ ಸ್ವಾಮೀಜಿ, ಪಾದಯಾತ್ರಿಗಳ ಸಂಘದ ನಾಯಕ ಬೆಂಗಳೂರಿನ ಹನುಮಂತಪ್ಪ ಮತ್ತು ಮರಿಯಪ್ಪ ಉಪಸ್ಥಿತರಿದ್ದರು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror