Advertisement
MIRROR FOCUS

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

Share

ಶಿವರಾತ್ರಿ ಅಂದರೆ ಪವಿತ್ರ ಹಾಗೂ ಮಂಗಳಕರ ರಾತ್ರಿ ಎಂದು ಅರ್ಥ. ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ ಕಳೆದು ಪುಣ್ಯ ಸಂಚಯವಾಗುತ್ತದೆ. ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ. ಜಪ-ತಪ, ಧ್ಯಾನದೊಂದಿಗೆ ವೃತ ನಿಯಮಗಳ ಪಾಲನೆ ಮಾಡಿದಾಗ ಜೀವನ ಪಾವನವಾಗುತ್ತದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.………ಮುಂದೆ ಓದಿ……..

ಅವರು ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಮಾತು ಬಿಡ ಮಂಜುನಾಥ ಎಂಬ ಮಾತು ಪ್ರಚಲಿತವಿದೆ. ನಮ್ಮ ಮಾತು ಮತ್ತು ಕೃತಿಗೆ ಅಂತರವಿರಬಾರದು. ನುಡಿದಂತೆ ನಡೆಯಬೇಕು. ಆಗ ಸತ್ಯ, ಧರ್ಮ, ನ್ಯಾಯ, ನೀತಿಯ ಪಾಲನೆಯೊಂದಿಗೆ ಎಲ್ಲವೂ ಸುಗಮವಾಗಿ ಜೀವನ ಪಾವನವಾಗುತ್ತದೆ. ಮನದಲ್ಲಿರುವ ಕೆಟ್ಟ ಯೋಚನೆ, ಭಾವನೆಗಳನ್ನು ತ್ಯಜಿಸಿ ಎಲ್ಲರೂ ಸುಖಿಗಳಾಗಿರಲಿ ಎಂಬ ಉದಾತ್ತ ಭಾವನೆಯೊಂದಿಗೆ ಲೋಕಕಲ್ಯಾಣವಾಗಲಿ ಎಂದು ಶುಭ ಚಿಂತನೆ ಮಾಡಬೇಕು. ಆಗ ಕಾಲಕ್ಕೆ ಸರಿಯಾಗಿ ಮಳೆ, ಬೆಳೆ ಆಗಿ ಎಲ್ಲೆಲ್ಲೂ ಸುಖ-ಶಾಂತಿ ಮತ್ತು ನೆಮ್ಮದಿ ನೆಲೆಸುತ್ತದೆ ಎಂದು ಹೆಗ್ಗಡೆಯವರು ಹೇಳಿದರು.
ಬಳಿಕ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ ಆರಂಭಗೊಂಡಿತು.

ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ದೇವರಿಗೆ ಶತರುದ್ರಾಭಿಷೇಕ ಮತ್ತು ಸೀಯಾಳ ಅಭಿಷೇಕ ಸೇವೆ ಅರ್ಪಿಸಿ ಧನ್ಯತೆಯನ್ನು ಹೊಂದಿದರು.
ಹೇಮಾವತಿ ವಿ. ಹೆಗ್ಗಡೆಯವರು, ಸುಪ್ರಿಯಾ ಹರ್ಷೇಂದ್ರ ಕುಮಾರ್, ಬೆಂಗಳೂರಿನ ಹನುಮಂತಪ್ಪ ಗುರೂಜಿ ಮತ್ತು ಮರಿಯಪ್ಪ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

2 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

4 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

4 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

6 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

11 hours ago