ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಶಿವಪಂಚಾಕ್ಷರಿ ಪಠಣ ಆರಂಭ |

February 18, 2023
10:26 PM

ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು  ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ.  ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿಎಲ್ಲರೂ ಶ್ರದ್ಧಾ ಭಕ್ತಿಯಿಂದದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು  ಹೇಳಿದರು.

ಅಹೋ ರಾತ್ರಿ ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ಸೀಯಾಳ ಅಭಿಷೇಕ, ಶತರುದ್ರಾಭಿಷೇಕ ಸೇವೆ ಸಲ್ಲಿಸಲಿದ್ದಾರೆ.
ದೇವಸ್ಥಾನ ಆವರಣದಲ್ಲಿ ಭಕ್ತರು ಶಿವಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಧ್ಯಾನದಲ್ಲಿ ತೊಡಗಿದ್ದಾರೆ.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಮಾಣಿಲ ಮೋಹನದಾಸ ಸ್ವಾಮೀಜಿ, ಪಾದಯಾತ್ರಿಗಳ ಸಂಘದ ನಾಯಕ ಬೆಂಗಳೂರಿನ ಹನುಮಂತಪ್ಪ ಮತ್ತು ಮರಿಯಪ್ಪ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror