Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ “ವಾತ್ಸಲ್ಯ” ಸಮಾಜ ಬಾಂಧವರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮಕ್ಕೆ ಚಾಲನೆ

Share

ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವುದೇ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು.

ಅವರು ಬುಧವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ವಾತ್ಸಲ್ಯ” ಸಮಾಜ ಬಾಂಧವರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು. ಯಾವುದೇ ವಸ್ತು ಅಥವಾ ಪ್ರಾಣಿಗೆ ಬೆಲೆ ಕಟ್ಟಬಹುದು. ಆದರೆ ಮನುಷ್ಯನಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಬಡತನ ಎಂಬುದು ಶಾಪವಲ್ಲ. ಅವರವರ ಕರ್ಮವೂ ಅಲ್ಲ. ಸಹಾನುಭೂತಿಯಿಂದ ಮಾನವೀಯತೆಯೊಂದಿಗೆ ನೊಂದವರಿಗೆ ಅಭಯ ನೀಡಿ ನೆಮ್ಮದಿಯ ಜೀವನ ನಡೆಸಲು ನೆರವಾಗುವುದೇ ಮಾನವಧರ್ಮ ಎಂದು ಅವರು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ಮಾರ್ಗದರ್ಶನ ನೀಡುವುದೇ “ವಾತ್ಸಲ್ಯ” ಯೋಜನೆಯ ಉದ್ದೇಶವಾಗಿದೆ. ಹಿರಿಯರು ಮಾತಿನಲ್ಲಿ ಶಾಪ ಕೊಡಬೇಕಾಗಿಲ್ಲ. ಮನದಲ್ಲಿ ನೊಂದು ಕಣ್ಣೀರು ಹಾಕಿದರೂ, ಅವರ ಕಣ್ಣೀರೇ ಶಾಪವಾಗಿ ಪರಿಣಮಿಸುತ್ತದೆ. ಆಧುನಿಕ ಸಮಾಜದಲ್ಲಿ ನಿರ್ಗತಿಕರನ್ನು, ರೋಗಿಗಳನ್ನು, ವೃದ್ಧರನ್ನು ಕಡೆಗಣಿಸುವುದು ಸಾಮಾನ್ಯವಾಗಿದೆ. ಇಳಿ ವಯಸ್ಸಿನಲ್ಲಿ ಅವರಿಗೆ ಅಭಯ ನೀಡಿ ಪ್ರೀತಿ-ವಿಶ್ವಾಸದಿಂದ ಆರೈಕೆ ಮಾಡಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಪ್ರೇರಣೆ ನೀಡುವುದೇ “ವಾತ್ಸಲ್ಯ” ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಈ ವರ್ಷ ನಿರ್ಗತಿಕರಿಗೆ ಹತ್ತು ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.
ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬೆಂಗಳೂರಿನ ವಿ.ರಾಮಸ್ವಾಮಿ ಉಪಸ್ಥಿತರಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್. ಮಂಜುನಾಥ್ ಸ್ವಾಗತಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪೈ. ಎಸ್ ಧನ್ಯವಾದವಿತ್ತರು. ನಿರ್ದೇಶಕಿ ಮಮತಾರಾವ್‍‌ ಕಾರ್ಯಕ್ರಮ ನಿರ್ವಹಿಸಿದರು.

ಮುಖ್ಯಾಂಶಗಳು:
 ರಾಜ್ಯದಲ್ಲಿ 10,461 ಮಂದಿಗೆ ವರ್ಷಕ್ಕೆ 8 ಕೋಟಿರೂ. ಮಾಸಾಶನ ವಿತರಣೆ ಮಾಡಲಾಗುತ್ತಿದೆ.  ಬುಧವಾರಒಂದುಕೋಟಿರೂ. ವೆಚ್ಛದಲ್ಲಿರಾಜ್ಯದೆಲ್ಲೆಡೆ ಏಕ ಕಾಲದಲ್ಲಿ 7,300 ಕಿಟ್ ವಿತರಣೆ.  ಅಡುಗೆ ಪಾತ್ರೆಗಳು, ಚಾಪೆ, ಹೊದಿಕೆ ಮೊದಲಾದ ಮೂಲಭೂತಅವಶ್ಯಕ ವಸ್ತುಗಳು ಕಿಟ್‍ನಲ್ಲಿ ಮನೆ ಬಾಗಿಲಿಗೆ ಒದಗಿಸಲಾಗುವುದು.  ಸ್ವಾವಲಂಬಿ ಹಾಗೂ ಸ್ವಾಭಿಮಾನಿಗಳಾಗಿ ಎಲ್ಲರೂ ನೆಮ್ಮದಿಯಿಂದಜೀವನ ನಡೆಸಬೇಕು.  ವಾತ್ಸಲ್ಯಕಿಟ್ ಸಾಗಿಸುವ ಟ್ರಕ್‍ಗಳಿಗೆ ಚಾಲನೆ ನೀಡಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

13 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

14 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

14 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

14 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

14 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

22 hours ago