ಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನ

November 21, 2024
6:59 PM

ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.ಗುರುವಾರದಿಂದ 2025 ರ ಮೇ 23 ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.

ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7  ರಿಂದ ರಾತ್ರಿ 12  ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ. ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.
ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror