ಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನ

November 21, 2024
6:59 PM

ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.ಗುರುವಾರದಿಂದ 2025 ರ ಮೇ 23 ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.

ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7  ರಿಂದ ರಾತ್ರಿ 12  ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ. ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.
ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror