Advertisement
ಸುದ್ದಿಗಳು

ಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನ

Share

ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.ಗುರುವಾರದಿಂದ 2025 ರ ಮೇ 23 ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.

ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7  ರಿಂದ ರಾತ್ರಿ 12  ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ. ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.
ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

2 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

3 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

10 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

16 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

16 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago