ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಆರಂಭ

November 26, 2022
7:06 PM

ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ.

ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ 7.00 ಗಂಟೆಯಿಂದ ರಾತ್ರಿ 12.00 ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ.

ಆಧ್ಯಾತ್ಮಿಕ ಮತ್ತುಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷವಾಗಿದೆ. ಮೇಳದ ತಿರುಗಾಟಕ್ಕೆಶನಿವಾರಚಾಲನೆ ನೀಡಿ ಶುಭಹಾರೈಸಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು,  ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್ ಹಾಗೂ  ಸುಪ್ರಿಯಾ ಹೆಚ್. ಕುಮಾರ್ ಅವರು ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror