ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಆರಂಭ

November 26, 2022
7:06 PM

ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ.

ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ 7.00 ಗಂಟೆಯಿಂದ ರಾತ್ರಿ 12.00 ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ.

ಆಧ್ಯಾತ್ಮಿಕ ಮತ್ತುಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷವಾಗಿದೆ. ಮೇಳದ ತಿರುಗಾಟಕ್ಕೆಶನಿವಾರಚಾಲನೆ ನೀಡಿ ಶುಭಹಾರೈಸಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು,  ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್ ಹಾಗೂ  ಸುಪ್ರಿಯಾ ಹೆಚ್. ಕುಮಾರ್ ಅವರು ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror