ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ.
ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ 7.00 ಗಂಟೆಯಿಂದ ರಾತ್ರಿ 12.00 ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ. ಆಧ್ಯಾತ್ಮಿಕ ಮತ್ತುಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷವಾಗಿದೆ. ಮೇಳದ ತಿರುಗಾಟಕ್ಕೆಶನಿವಾರಚಾಲನೆ ನೀಡಿ ಶುಭಹಾರೈಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್ ಹಾಗೂ ಸುಪ್ರಿಯಾ ಹೆಚ್. ಕುಮಾರ್ ಅವರು ಉಪಸ್ಥಿತರಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…