ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ.
ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ 7.00 ಗಂಟೆಯಿಂದ ರಾತ್ರಿ 12.00 ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ. ಆಧ್ಯಾತ್ಮಿಕ ಮತ್ತುಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷವಾಗಿದೆ. ಮೇಳದ ತಿರುಗಾಟಕ್ಕೆಶನಿವಾರಚಾಲನೆ ನೀಡಿ ಶುಭಹಾರೈಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್ ಹಾಗೂ ಸುಪ್ರಿಯಾ ಹೆಚ್. ಕುಮಾರ್ ಅವರು ಉಪಸ್ಥಿತರಿದ್ದರು.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…