ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ.
ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ 7.00 ಗಂಟೆಯಿಂದ ರಾತ್ರಿ 12.00 ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ. ಆಧ್ಯಾತ್ಮಿಕ ಮತ್ತುಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷವಾಗಿದೆ. ಮೇಳದ ತಿರುಗಾಟಕ್ಕೆಶನಿವಾರಚಾಲನೆ ನೀಡಿ ಶುಭಹಾರೈಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್ ಹಾಗೂ ಸುಪ್ರಿಯಾ ಹೆಚ್. ಕುಮಾರ್ ಅವರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…