Advertisement
ಸುದ್ದಿಗಳು

ಮುಂದಿನ ವರ್ಷದಿಂದ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ

Share
ರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು.

ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಜನಾ ತರಬೇತಿ ಕಮ್ಮಟದಿಂದಾಗಿ ಜನರಲ್ಲಿ ಭಜನೆ ಬಗ್ಗೆ ಗೌರವ, ಭಕ್ತಿ, ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ ಪ್ರಜ್ಞೆ ಮೂಡಿಬಂದಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ದೇವರ ಅಪ್ಪಣೆ ಪಡೆದು ಜಾತ್ರೆ ಹಾಗೂ ಎಲ್ಲಾ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಈ ವರ್ಷ ಭಜನಾ ತರಬೇತಿ ಕಮ್ಮಟದ ಬದಲು ಸಾಂಕೇತಿಕವಾಗಿ ಒಂದು ದಿನದ ಪ್ರಾರ್ಥನಾ ಸಮಾವೇಶ ನಡೆಸಲಾಗುತ್ತದೆ ಎಂದು ಹೇಳಿದರು. ಪ್ರಾರ್ಥನಾ ಸಮಾವೇಶ ಉದ್ಘಾಟಿಸಿದ ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಭಜನೆಯಿಂದ ಮಾನಸಿಕ ಪರಿವರ್ತನೆಯಾಗಿ ತಾಮಸ ಗುಣಗಳು ದೂರವಾಗಿ ಸಾತ್ವಿಕ ಗುಣಗಳು ಮೂಡಿಬರುತ್ತವೆ. ಉತ್ತಮ ಸಂಸ್ಕಾರದೊಂದಿಗೆ ಧರ್ಮದ ಅನುಷ್ಠಾನವಾಗುತ್ತದೆ ಎಂದರು.

ಗಣೇಶ್ ಅಮೀನ್ ಸಂಕಮಾರ್ ಶುಭಾಶಂಸನೆ ಮಾಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಶ್ವ ವಿಜ್ಞಾನಿಯಾಗಿದ್ದು, ಧರ್ಮಸ್ಥಳವು ಲೋಕ ಕಲ್ಯಾಣವನ್ನು ಉಂಟುಮಾಡುವ ಜಾಗತಿಕ ವಿಶ್ವವಿದ್ಯಾಲಯವಾಗಿದೆ ಎಂದು ಬಣ್ಣಿಸಿದರು. ಧರ್ಮಸ್ಥಳದಲ್ಲಿ ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ನೆಲೆ ನಿಂತಿದ್ದು ನಿತ್ಯವೂ ಅನುಷ್ಠಾನದಲ್ಲಿದೆ. ಇಲ್ಲಿ ನಿತ್ಯವೂ ನಡೆಯುವ ಚತುರ್ವಿಧ ದಾನ ಪರಂಪರೆ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾಕಾರ್ಯಗಳು, ಮಹಿಳಾ ಸಬಲೀಕರಣ, ಲೋಕ ಕಲ್ಯಾಣ ಕಾರ್ಯಕ್ರಮಗಳು ವಿಶ್ವಮಾನ್ಯವಾಗಿದೆ ಎಂದು ಶ್ಲಾಘಿಸಿದರು.

ಹೆಗ್ಗಡೆಯವರ ಬಗ್ಗೆ ಬರೆದು ಪ್ರಕಟಿಸಿದ “ಧರ್ಮಯಾನ” ಅವರ ಆದರ್ಶ ವ್ಯಕ್ತಿತ್ವದ ವಿಶ್ವರೂಪದರ್ಶನವಾಗಿದೆ ಎಂದು ಹೇಳಿ ಅಭಿನಂದಿಸಿದರು. ಮೂವತ್ತು ಸಾವಿರ “ಶಿವಪಂಚಾಕ್ಷರಿ ಪಠಣ” ಮಾಡಲಾಯಿತು ಸಾಮೂಹಿಕ ಭಜನೆ, ಪ್ರಾರ್ಥನೆ ನಡೆಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

9 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

9 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

9 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

10 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago