ಸುದ್ದಿಗಳು

ಮುಂದಿನ ವರ್ಷದಿಂದ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು.
Advertisement
Advertisement

ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಜನಾ ತರಬೇತಿ ಕಮ್ಮಟದಿಂದಾಗಿ ಜನರಲ್ಲಿ ಭಜನೆ ಬಗ್ಗೆ ಗೌರವ, ಭಕ್ತಿ, ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ ಪ್ರಜ್ಞೆ ಮೂಡಿಬಂದಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ದೇವರ ಅಪ್ಪಣೆ ಪಡೆದು ಜಾತ್ರೆ ಹಾಗೂ ಎಲ್ಲಾ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಈ ವರ್ಷ ಭಜನಾ ತರಬೇತಿ ಕಮ್ಮಟದ ಬದಲು ಸಾಂಕೇತಿಕವಾಗಿ ಒಂದು ದಿನದ ಪ್ರಾರ್ಥನಾ ಸಮಾವೇಶ ನಡೆಸಲಾಗುತ್ತದೆ ಎಂದು ಹೇಳಿದರು. ಪ್ರಾರ್ಥನಾ ಸಮಾವೇಶ ಉದ್ಘಾಟಿಸಿದ ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಭಜನೆಯಿಂದ ಮಾನಸಿಕ ಪರಿವರ್ತನೆಯಾಗಿ ತಾಮಸ ಗುಣಗಳು ದೂರವಾಗಿ ಸಾತ್ವಿಕ ಗುಣಗಳು ಮೂಡಿಬರುತ್ತವೆ. ಉತ್ತಮ ಸಂಸ್ಕಾರದೊಂದಿಗೆ ಧರ್ಮದ ಅನುಷ್ಠಾನವಾಗುತ್ತದೆ ಎಂದರು.

ಗಣೇಶ್ ಅಮೀನ್ ಸಂಕಮಾರ್ ಶುಭಾಶಂಸನೆ ಮಾಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಶ್ವ ವಿಜ್ಞಾನಿಯಾಗಿದ್ದು, ಧರ್ಮಸ್ಥಳವು ಲೋಕ ಕಲ್ಯಾಣವನ್ನು ಉಂಟುಮಾಡುವ ಜಾಗತಿಕ ವಿಶ್ವವಿದ್ಯಾಲಯವಾಗಿದೆ ಎಂದು ಬಣ್ಣಿಸಿದರು. ಧರ್ಮಸ್ಥಳದಲ್ಲಿ ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ನೆಲೆ ನಿಂತಿದ್ದು ನಿತ್ಯವೂ ಅನುಷ್ಠಾನದಲ್ಲಿದೆ. ಇಲ್ಲಿ ನಿತ್ಯವೂ ನಡೆಯುವ ಚತುರ್ವಿಧ ದಾನ ಪರಂಪರೆ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾಕಾರ್ಯಗಳು, ಮಹಿಳಾ ಸಬಲೀಕರಣ, ಲೋಕ ಕಲ್ಯಾಣ ಕಾರ್ಯಕ್ರಮಗಳು ವಿಶ್ವಮಾನ್ಯವಾಗಿದೆ ಎಂದು ಶ್ಲಾಘಿಸಿದರು.

ಹೆಗ್ಗಡೆಯವರ ಬಗ್ಗೆ ಬರೆದು ಪ್ರಕಟಿಸಿದ “ಧರ್ಮಯಾನ” ಅವರ ಆದರ್ಶ ವ್ಯಕ್ತಿತ್ವದ ವಿಶ್ವರೂಪದರ್ಶನವಾಗಿದೆ ಎಂದು ಹೇಳಿ ಅಭಿನಂದಿಸಿದರು. ಮೂವತ್ತು ಸಾವಿರ “ಶಿವಪಂಚಾಕ್ಷರಿ ಪಠಣ” ಮಾಡಲಾಯಿತು ಸಾಮೂಹಿಕ ಭಜನೆ, ಪ್ರಾರ್ಥನೆ ನಡೆಸಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

4 hours ago

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…

5 hours ago

ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

14 hours ago

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು…

15 hours ago

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…

15 hours ago