Advertisement
ಸುದ್ದಿಗಳು

ಮುಂದಿನ ವರ್ಷದಿಂದ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ

Share
ರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು.

ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಜನಾ ತರಬೇತಿ ಕಮ್ಮಟದಿಂದಾಗಿ ಜನರಲ್ಲಿ ಭಜನೆ ಬಗ್ಗೆ ಗೌರವ, ಭಕ್ತಿ, ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ ಪ್ರಜ್ಞೆ ಮೂಡಿಬಂದಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ದೇವರ ಅಪ್ಪಣೆ ಪಡೆದು ಜಾತ್ರೆ ಹಾಗೂ ಎಲ್ಲಾ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಈ ವರ್ಷ ಭಜನಾ ತರಬೇತಿ ಕಮ್ಮಟದ ಬದಲು ಸಾಂಕೇತಿಕವಾಗಿ ಒಂದು ದಿನದ ಪ್ರಾರ್ಥನಾ ಸಮಾವೇಶ ನಡೆಸಲಾಗುತ್ತದೆ ಎಂದು ಹೇಳಿದರು. ಪ್ರಾರ್ಥನಾ ಸಮಾವೇಶ ಉದ್ಘಾಟಿಸಿದ ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಭಜನೆಯಿಂದ ಮಾನಸಿಕ ಪರಿವರ್ತನೆಯಾಗಿ ತಾಮಸ ಗುಣಗಳು ದೂರವಾಗಿ ಸಾತ್ವಿಕ ಗುಣಗಳು ಮೂಡಿಬರುತ್ತವೆ. ಉತ್ತಮ ಸಂಸ್ಕಾರದೊಂದಿಗೆ ಧರ್ಮದ ಅನುಷ್ಠಾನವಾಗುತ್ತದೆ ಎಂದರು.

ಗಣೇಶ್ ಅಮೀನ್ ಸಂಕಮಾರ್ ಶುಭಾಶಂಸನೆ ಮಾಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಶ್ವ ವಿಜ್ಞಾನಿಯಾಗಿದ್ದು, ಧರ್ಮಸ್ಥಳವು ಲೋಕ ಕಲ್ಯಾಣವನ್ನು ಉಂಟುಮಾಡುವ ಜಾಗತಿಕ ವಿಶ್ವವಿದ್ಯಾಲಯವಾಗಿದೆ ಎಂದು ಬಣ್ಣಿಸಿದರು. ಧರ್ಮಸ್ಥಳದಲ್ಲಿ ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ನೆಲೆ ನಿಂತಿದ್ದು ನಿತ್ಯವೂ ಅನುಷ್ಠಾನದಲ್ಲಿದೆ. ಇಲ್ಲಿ ನಿತ್ಯವೂ ನಡೆಯುವ ಚತುರ್ವಿಧ ದಾನ ಪರಂಪರೆ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾಕಾರ್ಯಗಳು, ಮಹಿಳಾ ಸಬಲೀಕರಣ, ಲೋಕ ಕಲ್ಯಾಣ ಕಾರ್ಯಕ್ರಮಗಳು ವಿಶ್ವಮಾನ್ಯವಾಗಿದೆ ಎಂದು ಶ್ಲಾಘಿಸಿದರು.

ಹೆಗ್ಗಡೆಯವರ ಬಗ್ಗೆ ಬರೆದು ಪ್ರಕಟಿಸಿದ “ಧರ್ಮಯಾನ” ಅವರ ಆದರ್ಶ ವ್ಯಕ್ತಿತ್ವದ ವಿಶ್ವರೂಪದರ್ಶನವಾಗಿದೆ ಎಂದು ಹೇಳಿ ಅಭಿನಂದಿಸಿದರು. ಮೂವತ್ತು ಸಾವಿರ “ಶಿವಪಂಚಾಕ್ಷರಿ ಪಠಣ” ಮಾಡಲಾಯಿತು ಸಾಮೂಹಿಕ ಭಜನೆ, ಪ್ರಾರ್ಥನೆ ನಡೆಸಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

16 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

23 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago