Advertisement
ಸುದ್ದಿಗಳು

ಮುಂದಿನ ವರ್ಷದಿಂದ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ

Share
ರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು.

ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಜನಾ ತರಬೇತಿ ಕಮ್ಮಟದಿಂದಾಗಿ ಜನರಲ್ಲಿ ಭಜನೆ ಬಗ್ಗೆ ಗೌರವ, ಭಕ್ತಿ, ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ ಪ್ರಜ್ಞೆ ಮೂಡಿಬಂದಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ದೇವರ ಅಪ್ಪಣೆ ಪಡೆದು ಜಾತ್ರೆ ಹಾಗೂ ಎಲ್ಲಾ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಈ ವರ್ಷ ಭಜನಾ ತರಬೇತಿ ಕಮ್ಮಟದ ಬದಲು ಸಾಂಕೇತಿಕವಾಗಿ ಒಂದು ದಿನದ ಪ್ರಾರ್ಥನಾ ಸಮಾವೇಶ ನಡೆಸಲಾಗುತ್ತದೆ ಎಂದು ಹೇಳಿದರು. ಪ್ರಾರ್ಥನಾ ಸಮಾವೇಶ ಉದ್ಘಾಟಿಸಿದ ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಭಜನೆಯಿಂದ ಮಾನಸಿಕ ಪರಿವರ್ತನೆಯಾಗಿ ತಾಮಸ ಗುಣಗಳು ದೂರವಾಗಿ ಸಾತ್ವಿಕ ಗುಣಗಳು ಮೂಡಿಬರುತ್ತವೆ. ಉತ್ತಮ ಸಂಸ್ಕಾರದೊಂದಿಗೆ ಧರ್ಮದ ಅನುಷ್ಠಾನವಾಗುತ್ತದೆ ಎಂದರು.

ಗಣೇಶ್ ಅಮೀನ್ ಸಂಕಮಾರ್ ಶುಭಾಶಂಸನೆ ಮಾಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಶ್ವ ವಿಜ್ಞಾನಿಯಾಗಿದ್ದು, ಧರ್ಮಸ್ಥಳವು ಲೋಕ ಕಲ್ಯಾಣವನ್ನು ಉಂಟುಮಾಡುವ ಜಾಗತಿಕ ವಿಶ್ವವಿದ್ಯಾಲಯವಾಗಿದೆ ಎಂದು ಬಣ್ಣಿಸಿದರು. ಧರ್ಮಸ್ಥಳದಲ್ಲಿ ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ನೆಲೆ ನಿಂತಿದ್ದು ನಿತ್ಯವೂ ಅನುಷ್ಠಾನದಲ್ಲಿದೆ. ಇಲ್ಲಿ ನಿತ್ಯವೂ ನಡೆಯುವ ಚತುರ್ವಿಧ ದಾನ ಪರಂಪರೆ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾಕಾರ್ಯಗಳು, ಮಹಿಳಾ ಸಬಲೀಕರಣ, ಲೋಕ ಕಲ್ಯಾಣ ಕಾರ್ಯಕ್ರಮಗಳು ವಿಶ್ವಮಾನ್ಯವಾಗಿದೆ ಎಂದು ಶ್ಲಾಘಿಸಿದರು.

ಹೆಗ್ಗಡೆಯವರ ಬಗ್ಗೆ ಬರೆದು ಪ್ರಕಟಿಸಿದ “ಧರ್ಮಯಾನ” ಅವರ ಆದರ್ಶ ವ್ಯಕ್ತಿತ್ವದ ವಿಶ್ವರೂಪದರ್ಶನವಾಗಿದೆ ಎಂದು ಹೇಳಿ ಅಭಿನಂದಿಸಿದರು. ಮೂವತ್ತು ಸಾವಿರ “ಶಿವಪಂಚಾಕ್ಷರಿ ಪಠಣ” ಮಾಡಲಾಯಿತು ಸಾಮೂಹಿಕ ಭಜನೆ, ಪ್ರಾರ್ಥನೆ ನಡೆಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 hour ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago