Advertisement
ಸುದ್ದಿಗಳು

ಮುಂದಿನ ವರ್ಷದಿಂದ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ

Share
ರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು.

ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಜನಾ ತರಬೇತಿ ಕಮ್ಮಟದಿಂದಾಗಿ ಜನರಲ್ಲಿ ಭಜನೆ ಬಗ್ಗೆ ಗೌರವ, ಭಕ್ತಿ, ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ ಪ್ರಜ್ಞೆ ಮೂಡಿಬಂದಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ದೇವರ ಅಪ್ಪಣೆ ಪಡೆದು ಜಾತ್ರೆ ಹಾಗೂ ಎಲ್ಲಾ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಈ ವರ್ಷ ಭಜನಾ ತರಬೇತಿ ಕಮ್ಮಟದ ಬದಲು ಸಾಂಕೇತಿಕವಾಗಿ ಒಂದು ದಿನದ ಪ್ರಾರ್ಥನಾ ಸಮಾವೇಶ ನಡೆಸಲಾಗುತ್ತದೆ ಎಂದು ಹೇಳಿದರು. ಪ್ರಾರ್ಥನಾ ಸಮಾವೇಶ ಉದ್ಘಾಟಿಸಿದ ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಭಜನೆಯಿಂದ ಮಾನಸಿಕ ಪರಿವರ್ತನೆಯಾಗಿ ತಾಮಸ ಗುಣಗಳು ದೂರವಾಗಿ ಸಾತ್ವಿಕ ಗುಣಗಳು ಮೂಡಿಬರುತ್ತವೆ. ಉತ್ತಮ ಸಂಸ್ಕಾರದೊಂದಿಗೆ ಧರ್ಮದ ಅನುಷ್ಠಾನವಾಗುತ್ತದೆ ಎಂದರು.

ಗಣೇಶ್ ಅಮೀನ್ ಸಂಕಮಾರ್ ಶುಭಾಶಂಸನೆ ಮಾಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಶ್ವ ವಿಜ್ಞಾನಿಯಾಗಿದ್ದು, ಧರ್ಮಸ್ಥಳವು ಲೋಕ ಕಲ್ಯಾಣವನ್ನು ಉಂಟುಮಾಡುವ ಜಾಗತಿಕ ವಿಶ್ವವಿದ್ಯಾಲಯವಾಗಿದೆ ಎಂದು ಬಣ್ಣಿಸಿದರು. ಧರ್ಮಸ್ಥಳದಲ್ಲಿ ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ನೆಲೆ ನಿಂತಿದ್ದು ನಿತ್ಯವೂ ಅನುಷ್ಠಾನದಲ್ಲಿದೆ. ಇಲ್ಲಿ ನಿತ್ಯವೂ ನಡೆಯುವ ಚತುರ್ವಿಧ ದಾನ ಪರಂಪರೆ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾಕಾರ್ಯಗಳು, ಮಹಿಳಾ ಸಬಲೀಕರಣ, ಲೋಕ ಕಲ್ಯಾಣ ಕಾರ್ಯಕ್ರಮಗಳು ವಿಶ್ವಮಾನ್ಯವಾಗಿದೆ ಎಂದು ಶ್ಲಾಘಿಸಿದರು.

ಹೆಗ್ಗಡೆಯವರ ಬಗ್ಗೆ ಬರೆದು ಪ್ರಕಟಿಸಿದ “ಧರ್ಮಯಾನ” ಅವರ ಆದರ್ಶ ವ್ಯಕ್ತಿತ್ವದ ವಿಶ್ವರೂಪದರ್ಶನವಾಗಿದೆ ಎಂದು ಹೇಳಿ ಅಭಿನಂದಿಸಿದರು. ಮೂವತ್ತು ಸಾವಿರ “ಶಿವಪಂಚಾಕ್ಷರಿ ಪಠಣ” ಮಾಡಲಾಯಿತು ಸಾಮೂಹಿಕ ಭಜನೆ, ಪ್ರಾರ್ಥನೆ ನಡೆಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

2 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

3 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

2 days ago