Advertisement
Categories: Uncategorized

ಗುರುಗಳು ನಿಸ್ವಾರ್ಥ ಭಾವನೆಯಿಂದ ಜ್ಞಾನ ದಾನ ಮಾಡಬೇಕು – ಡಾ.ಡಿ ವೀರೇಂದ್ರ ಹೆಗ್ಗಡೆ

Share
ಶಿಕ್ಷಕರು ಬಹುಮುಖ ಪ್ರತಿಭೆಯನ್ನು  ಹೊಂದಿದ್ದು ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಪರಿಣತರಾಗಿದ್ದಾಗ ಅವರು ಎಲ್ಲಾ ವಿದ್ಯಾರ್ಥಿಗಳಿಂದ ಆತ್ಮೀಯವಾಗಿ ಗೌರವಿಸಲ್ಪಡುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತರಾದ ಎಸ್.ಬಿ. ನರೇಂದ್ರ ಕುಮಾರ್ ಅವರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಮಾನ್ಯವಾಗಿ ಎಲ್ಲಾ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಶಿಸ್ತು ಮತ್ತು ಸ್ವಚ್ಛತೆ ಕಾಪಾಡುವಲ್ಲಿ ಸಭೆ-ಸಮಾರಂಭ ಆಯೋಜಿಸುವಲ್ಲಿ ತಜ್ಞರಾಗಿರುತ್ತಾರೆ. ಅವರು ಶಾಲೆಯಲ್ಲಿ ಸರ್ವಾಂತರಯಾಮಿಯಾಗಿ ಎಲ್ಲರಿಗೂ ಚಿರಪರಿಚಿತರು. ನರೇಂದ್ರ ಕುಮಾರ್ ರಾಜ್ಯ ಮಟ್ಟ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ತಾರೆಗಳನ್ನು ರೂಪಿಸಿರುವುದಲ್ಲದೇ ಉತ್ತಮವಾದ ಉದಯೋನ್ಮುಖ ಪ್ರತಿಭಾವಂತ ಯಕ್ಷಗಾನ ಕಲಾವಿದರನ್ನೂ ರೂಪಿಸಿದ್ದಾರೆ. ಎನ್.ಸಿ.ಸಿ .ನೇವಲ್ ಘಟಕದ ಅಧಿಕಾರಿಯಾಗಿ ಯಕ್ಷಗಾನ ತರಬೇತುದಾರರಾಗಿ ಉತ್ತಮ ಸೇವೆ ನೀಡಿದ್ದಾರೆ. ವಿದ್ಯಾರ್ಥಿಗಳ ಯಕ್ಷಗಾನ ತಂಡವನ್ನು ವಿವಿಧ ರಾಜ್ಯಗಳಿಗೆ ಹಾಗೂ ವಿದೇಶಗಳಿಗೆ ಕರೆದುಕೊಂಡು ಹೋಗಿ ಉತ್ತಮ ಪ್ರದರ್ಶನ ನೀಡಿ ಕೀರ್ತಿ ತಂದಿರುತ್ತಾರೆ. ಈ ರೀತಿ ಎಲ್ಲಾ ಗುರುಗಳು ನಮ್ಮಲ್ಲಿರುವ ಜ್ಞಾನವನ್ನು ವಿದ್ಯಾರ್ಥಿಗಳಿಗೆ ನಿಸ್ವಾರ್ಥವಾಗಿ ಉದಾರ ದಾನ ಮಾಡಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಶಿಸ್ತಿ ಸಿಪಾಯಿಗಳಾದ ಇಂತಹ ಶಿಕ್ಷಕರನ್ನು ವಿದ್ಯಾರ್ಥಿಗಳು ಯಾವಾಗಲೂ ಆತ್ಮೀಯವಾಗಿ ಗೌರವಿಸಿ ಧನ್ಯತೆಯಿಂದ ಸ್ಮರಿಸುತ್ತಾರೆ ಎಂದು ಅವರು ಹೇಳಿದರು.
ಅಭಿನಂದನಾ ಭಾಷಣ ಮಾಡಿದ ಉಜಿರೆಯ ಎಸ್.ಡಿ.ಎಮ್. ಸನಿವಾಸ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ಮಾತನಾಡಿ ಸರಳ ವ್ಯಕ್ತಿತ್ವದ ಸಜ್ಜನರಾದ ನರೇಂದ್ರ ಕುಮಾರ್ ನೃತ್ಯ, ವೇಷಭೂಷಣ ತೊಡಿಸುವುದು, ಚಕ್ರತಾಳ, ರಾಕ್ಷಸ ವೇಷ ಮೊದಲಾದ ಯಕ್ಷಗಾನದ ಎಲ್ಲಾ ಮಜಲುಗಳಲ್ಲಿ ಉತ್ತಮ ಸೇವೆ ನೀಡಿದ್ದಾರೆ. ಅವರ ಕಿರಾತ, ಶೂರ್ಪನಕಿ ಮತ್ತು ವೀರಭಧ್ರನ ಪಾತ್ರಗಳು ಖ್ಯಾತಿ ಪಡೆದಿವೆ. ಅವರೊಬ್ಬ ಆಲ್‌ರೌಂಡರ್ ಕಲಾವಿದರು ಎಂದು ಶ್ಲಾಘಿಸಿದರು.
ನರೇಂದ್ರ ಕುಮಾರ್ ಅಭಿನಂದನೆಗೆ ಕೃತಜ್ಞತೆ ವ್ಯಕ್ತಪಡಿಸಿ ಹೆಗ್ಗಡೆಯವರು ಮತ್ತು ಕುಟುಂಬದವರ ನಿರಂತರ ಪ್ರೋತ್ಸಾಗ ಮಾರ್ಗದರ್ಶನ ಮತ್ತು ನೆರವನ್ನು ಕೃತಜ್ಞತೆಯಿಂದ ಸ್ಮರಿಸಿದರು,. ಧಾರವಾಡದ ಪದ್ಮಲತಾ ನಿರಂಜನ್ ಕುಮಾರ್ ಕಳುಹಿಸಿದ ಉಡುಗೊರೆ ಮತ್ತು ಗೌರವಾರ್ಪಣೆಯನ್ನು ಡಿ. ಹರ್ಷೇಂದ್ರ ಕುಮಾರ್ ನೀಡಿದರು.
ನರೇಂದ್ರ ಕುಮಾರ್ ಅವರ ಜೀವನ ಸಾಧನೆಯ ಮಾಹಿತಿ ಪುಸ್ತಕವನ್ನು ಡಿ. ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿದರು. ಡಿ. ಅನಂತ ಪದ್ಮನಾಭ ಭಟ್ ಸ್ವಾಗತಿಸಿದರು. ಶ್ರೀನಿವಾಸ್ ರಾವ್ ಧನ್ಯವಾದವಿತ್ತರು. ಶ್ರೀಹರಿ ಕಾರ್ಯಕ್ರಮ ನಿರ್ವಹಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago