‘ಕಾಂತಾರ 2’ ಚಿತ್ರದ ಮಹೂರ್ತಕ್ಕೆ ಪಂಜುರ್ಲಿ ಮತ್ತು ಗುಳಿಗ ದೈವ ಅಸ್ತು ಎಂದಿದೆಯಾ..? | ಯಾವಾಗ ಆರಂಭವಾಗಲಿದೆ ಕಾಂತಾರ 2 ಚಿತ್ರದ ಶೂಟಿಂಗ್..? |

November 20, 2023
1:51 PM

ಇಡೀ ವಿಶ್ವವೇ ಬೆರಗುಗಣ್ಣಿನಿಂದ ನೋಡಿದ ಸಿನಿಮಾ(Cinema), ನಮ್ಮ ತುಳು ನಾಡಿನ ಸಂಸ್ಖೃತಿಯನ್ನು ಬಿಂಬಿಸುವ ಕಾಂತರ ಚಿತ್ರ(Kantara). ಅಷ್ಟೆಲ್ಲಾ ಸದ್ದು ಮಾಡಿದ್ದ ಚಿತ್ರದ(Movie) ಎರಡನೇ ಭಾಗ ಅದ್ದೂರಿಯಾಗಿ ಮತ್ತೆ ಜನರನ್ನು ರಂಜಿಸಲಿದೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಇದೀಗ ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ 2  ಸಿನಿಮಾ ಮಹೂರ್ತದ (Muhurta) ಕುರಿತಂತೆ ಪಂಜುರ್ಲಿ (Panjurl) ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ ಎಂಬ ಸುದ್ದಿ ಹೊರಬಿದ್ದಿದೆ.

Advertisement
Advertisement

ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆಯಂತೆ. ಈ ಕುರಿತು ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ. ‘ಕಾಂತಾರ’ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ’ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ.

Advertisement
Advertisement

ಕಾಂತಾರ (Kantara) ಸೂಪರ್ ಡೂಪರ್ ಹಿಟ್ ಆದಂತೆಯೇ ‘ಕಾಂತಾರ 2’ ಅದಕ್ಕಿಂತ ಹೆಚ್ಚಿನ ಯಶಸ್ಸು ಪಡೆದು ಗೆದ್ದು ಬೀಗಲೇಬೇಕೆಂದು ರಿಷಬ್ ಶೆಟ್ಟಿ ಕೂಡ ತೆರೆಮರೆಯಲ್ಲಿ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕಾಗಿ ತಮ್ಮ ಲುಕ್ ಕೂಡ ಜೇಂಜ್ ಮಾಡಿ, ಸಿನಿಮಾ ಕಥೆಯಲ್ಲಿ ಸಾಕಷ್ಟು ಕೆಲಸ ಮಾಡಿಯೇ ಕಾಂತಾರ 2ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿನಿಮಾ ಮುಹೂರ್ತ ಸಮಾರಂಭದ ದಿನ ಸಿಗಲಿದೆ.

The film crew approached Panjurl and Guliga Deiva about the Muhurta of Kantara 2 directed by Rishabh Shetty and got information that the deities are astu. So the news has come out that the film team has made all preparations for Muhurta. Another news is that this movie will also have a story that starts from the 14th century. The movie ‘Kantara’ had a successful worldwide reach.

Advertisement

– ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಇದು ಡಿಸೆಂಬರ್ ತಿಂಗಳು ಅಷ್ಟೇ. ಇನ್ನು ಏಪ್ರಿಲ್, ಮೇ ತಿಂಗಳಲ್ಲಿ ತಾಪ, ಉರಿ ಬಿಸಿಲು ಹೇಗಿರಬಹುದು?
December 8, 2023
3:39 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಶ್ರೀರಾಮನ ಪೌರೋಹಿತ್ಯ ಸೇವೆಗೆ ಆಯ್ಕೆಯಾದ ಸಕಲ ವೇದ ಪಾರಂಗತ “ಮೋಹಿತ್ ಪಾಂಡೆ” : ಯಾರು ಈತ..? ಎಲ್ಲಿಯ ಹುಡುಗ..?
December 8, 2023
3:18 PM
by: The Rural Mirror ಸುದ್ದಿಜಾಲ
ಮಧುಮೇಹಕ್ಕೆ ಕೇವಲ ಸಿಹಿ ತಿಂಡಿಗಳೇ ಕಾರಣವಲ್ಲ… : ಹಾಗಾದರೆ ಸಕ್ಕರೆ ಕಾಯಿಲೆ ಬರಲು ಕಾರಣವೇನು..?
December 8, 2023
3:01 PM
by: The Rural Mirror ಸುದ್ದಿಜಾಲ
ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ | ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ |
December 8, 2023
2:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror