Advertisement
Opinion

‘ಕಾಂತಾರ 2’ ಚಿತ್ರದ ಮಹೂರ್ತಕ್ಕೆ ಪಂಜುರ್ಲಿ ಮತ್ತು ಗುಳಿಗ ದೈವ ಅಸ್ತು ಎಂದಿದೆಯಾ..? | ಯಾವಾಗ ಆರಂಭವಾಗಲಿದೆ ಕಾಂತಾರ 2 ಚಿತ್ರದ ಶೂಟಿಂಗ್..? |

Share

ಇಡೀ ವಿಶ್ವವೇ ಬೆರಗುಗಣ್ಣಿನಿಂದ ನೋಡಿದ ಸಿನಿಮಾ(Cinema), ನಮ್ಮ ತುಳು ನಾಡಿನ ಸಂಸ್ಖೃತಿಯನ್ನು ಬಿಂಬಿಸುವ ಕಾಂತರ ಚಿತ್ರ(Kantara). ಅಷ್ಟೆಲ್ಲಾ ಸದ್ದು ಮಾಡಿದ್ದ ಚಿತ್ರದ(Movie) ಎರಡನೇ ಭಾಗ ಅದ್ದೂರಿಯಾಗಿ ಮತ್ತೆ ಜನರನ್ನು ರಂಜಿಸಲಿದೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಇದೀಗ ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ 2  ಸಿನಿಮಾ ಮಹೂರ್ತದ (Muhurta) ಕುರಿತಂತೆ ಪಂಜುರ್ಲಿ (Panjurl) ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ ಎಂಬ ಸುದ್ದಿ ಹೊರಬಿದ್ದಿದೆ.

ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆಯಂತೆ. ಈ ಕುರಿತು ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ. ‘ಕಾಂತಾರ’ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ’ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ.

ಕಾಂತಾರ (Kantara) ಸೂಪರ್ ಡೂಪರ್ ಹಿಟ್ ಆದಂತೆಯೇ ‘ಕಾಂತಾರ 2’ ಅದಕ್ಕಿಂತ ಹೆಚ್ಚಿನ ಯಶಸ್ಸು ಪಡೆದು ಗೆದ್ದು ಬೀಗಲೇಬೇಕೆಂದು ರಿಷಬ್ ಶೆಟ್ಟಿ ಕೂಡ ತೆರೆಮರೆಯಲ್ಲಿ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕಾಗಿ ತಮ್ಮ ಲುಕ್ ಕೂಡ ಜೇಂಜ್ ಮಾಡಿ, ಸಿನಿಮಾ ಕಥೆಯಲ್ಲಿ ಸಾಕಷ್ಟು ಕೆಲಸ ಮಾಡಿಯೇ ಕಾಂತಾರ 2ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿನಿಮಾ ಮುಹೂರ್ತ ಸಮಾರಂಭದ ದಿನ ಸಿಗಲಿದೆ.

The film crew approached Panjurl and Guliga Deiva about the Muhurta of Kantara 2 directed by Rishabh Shetty and got information that the deities are astu. So the news has come out that the film team has made all preparations for Muhurta. Another news is that this movie will also have a story that starts from the 14th century. The movie ‘Kantara’ had a successful worldwide reach.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

24 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago