Advertisement
ಸುದ್ದಿಗಳು

ಬಂಡೀಪುರದಲ್ಲಿ ಪ್ರಧಾನಿ ಮೋದಿ ಸಫಾರಿ ವೇಳೆ ಹುಲಿ ಕಾಣದೇ ಇರಲು ಕಾರಣ ಕೊನೆಗೂ ಬಹಿರಂಗ…!?

Share

ಪ್ರಧಾನಿ ಮೋದಿ ಬಂಡೀಪುರಕ್ಕೆ ಭೇಟಿ ನೀಡಿದ್ದ ವೇಳೆ 22 ಕಿ.ಮೀ ಸಫಾರಿಯಲ್ಲಿ ಒಂದೇ ಒಂದೂ ಹುಲಿ ಕಾಣದೇ ಇರುವುದು ಅಚ್ಚರಿ ಮೂಡಿಸಿತ್ತು.

ಬೆಳಿಗ್ಗೆ 7:15 ರಿಂದ 9:30 ವರೆಗೆ ಸಫಾರಿಯಲ್ಲಿ ಒಂದೇ ಒಂದು ಹುಲಿ ಕಾಣದ್ದಕ್ಕೆ, ಸಫಾರಿ ವೇಳೆ ವಾಹನ ಚಾಲನೆ ಮಾಡಿದ್ದ 29 ವರ್ಷದ ಚಾಲಕ ಮಧುಸೂಧನ್ ಬಗ್ಗೆಯೂ ಅಲ್ಲಲ್ಲಿ ಟೀಕೆ ವ್ಯಕ್ತವಾಗುತ್ತಿದ್ದು, ಆತ ಹುಲಿ ಕಾಣ ಸಿಗುವ ಸರಿಯಾದ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳದ್ದಕ್ಕೆ ಕ್ರಮ ಕೈಗೊಳ್ಳುವಂತೆ ಕೆಲವು ಬಿಜೆಪಿ ನಾಯಕರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಆಗ್ರಹಿಸುತ್ತಿದ್ದಾರೆ.

ಪ್ರಧಾನಿ ಸಂಚರಿಸಿದ್ದ ವಾಹನದ ನೋಂದಣಿಯನ್ನೇ ರದ್ದು ಮಾಡಬೇಕೆಂದೂ ಕೆಲವು ಟ್ವೀಟ್ ಗಳು ಬಂದಿವೆ. ಆದರೆ ಸಫಾರಿ ವೇಳೆ ಹುಲಿ ಕಾಣದ್ದಕ್ಕೆ ಇರುವ ನೈಜ ಕಾರಣವೆಂದರೆ ಅದು ಪ್ರಧಾನಿ ಭದ್ರತಾ ಸಿಬ್ಬಂದಿಗಳು! ಅಂದರೆ ಎಸ್ ಪಿಜಿ. ಅಚ್ಚರಿಯಾಯ್ತಾ?  ಹೌದು, ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರಕ್ಕೆ ಭೇಟಿ ನೀಡುವುದಕ್ಕೂ ಮುನ್ನ 5 ದಿನಗಳ ಹಿಂದೆ ಪ್ರಧಾನಿ ಸಫಾರಿ ಮಾಡಬೇಕಿದ್ದ ಜಾಗದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಸ್ ಪಿಜಿ, ಸ್ಥಳೀಯ ಪೊಲೀಸರು, ನಕ್ಸಲ್ ನಿಗ್ರಹ ಪಡೆ ಹಾಗೂ ಇನ್ನಿತರ ಭದ್ರತಾ ಪಡೆಗಳು ಹಲವು ಬಾರಿ ಸಫಾರಿ ಕೈಗೊಂಡು ತಪಾಸಣೆ ಮಾಡಿದ್ದರು.

ಈ ಬಗ್ಗೆ  ಮಾಹಿತಿ ನೀಡಿರುವ  ಬಿಟಿಆರ್ ನ ಹಿರಿಯ ಅಧಿಕಾರಿಯೊಬ್ಬರು, ಪ್ರಧಾನಿ ಭೇಟಿಗೆ 5 ದಿನಗಳ ಹಿಂದೆ ಭದ್ರತಾ ದೃಷ್ಟಿಯಿಂದ ತಪಾಸಣೆ, ಡ್ರಿಲ್ ಗಳನ್ನು ಅದೇ ಮಾರ್ಗದಲ್ಲಿ ಕೈಗೊಂಡಿದ್ದ ಅಧಿಕಾರಿಗಳಿಗೆ ಹುಲಿಗಳು ಕಂಡುಬಂದಿದ್ದವು. ಆಗ ಕಂಡುಬಂದಿದ್ದ ಹುಲಿಗಳ ಫೋಟೋಗಳನ್ನು ಭದ್ರತಾ ಸಿಬ್ಬಂದಿಗಳೂ ಕ್ಲಿಕ್ಕಿಸಿದ್ದರು. ಆದರೆ ಪ್ರಧಾನಿ ಮೋದಿ ಅವರಿಗೆ ಹುಲಿಗಳು ಆಗಷ್ಟೇ ನಡೆದುಹೋಗಿರುವ ಹೆಜ್ಜೆ ಗುರುತು ಕಂಡಿತೇ ಹೊರತು ಹುಲಿಗಳು ಕಾಣಲಿಲ್ಲ. ಆದರೆ ಪ್ರಧಾನಿ ಸಫಾರಿ ಕೈಗೊಳ್ಳುವ ವೇಳೆಗೆ ಅವು ಸುರಕ್ಷಿತವಾದ, ಹೆಚ್ಚು ಗದ್ದಲಗಳಿಲ್ಲದ ಪ್ರದೇಶಗಳಿಗೆ ತೆರಳಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಪ್ರಧಾನಿ ಸಫಾರಿಗೆ ಗುರುತಿಸಲಾದ ಮಾರ್ಗದಲ್ಲಿ ಹುಲಿಗಳು ತಿಂದು, ನಿದ್ದೆ ಮಾಡಿ ಅಲ್ಲಿಯೇ ಇರುತ್ತವೆ. ಭದ್ರತಾ ದೃಷ್ಟಿಯಿಂದ ಪ್ರಧಾನಿ ಇದ್ದ ಸಫಾರಿ ವಾಹನ ಬೆಂಗಾವಲು ಪಡೆ ಮಧ್ಯದಲ್ಲಿರುವಂತೆ ಯೋಜಿಸಲಾಗಿತ್ತು. ಆದರೆ ಸಫಾರಿ ವೇಳೆ ಎಂದಿಗೂ ಮುಂದೆ ಇರುವ ವಾಹನದಿಂದ ಪ್ರಾಣಿಗಳು ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಮನವಿ ಮಾಡಿದ್ದೆವು. ಆದ್ದರಿಂದ ಭದ್ರತಾ ಸಿಬ್ಬಂದಿಗಳು ಹೆಚ್ಚುವರಿ ಸಫಾರಿ ಸುತ್ತುಗಳನ್ನು ಕೈಗೊಂಡಿದ್ದರು. ಈ ರೀತಿ ಮುಂದೆ ಇರುವ ವಾಹನದಿಂದ ಸಫಾರಿ ಕೈಗೊಂಡಾಗ ಹುಲಿ, ಚಿರತೆಗಳು ಸ್ಪಷ್ಟವಾಗಿ ಗೋಚರಿಸಿ ಅವುಗಳ ಫೋಟೋಗಳನ್ನೂ ಭದ್ರತಾ ಅಧಿಕಾರಿಗಳು ಕ್ಲಿಕ್ಕಿಸಿದ್ದರು ಹಾಗೂ ಪ್ರಧಾನಿ ಮೋದಿ ಅವರು ಮುಂದಿನ ವಾಹನದಲ್ಲಿರಬೇಕು ಎಂಬ ಅಂಶವನ್ನೂ ಒಪ್ಪಿದ್ದರು.

ಇನ್ನು ಪ್ರಧಾನಿ ಮೋದಿ ಬರುವುದಕ್ಕೂ ಹಿಂದಿನ ದಿನ ಅಂದರೆ ಶನಿವಾರ ರಾತ್ರಿ, ಪ್ರಧಾನಿ ಮೋದಿ ಸಫಾರಿ ನಡೆಸುವ ಪ್ರದೇಶಗಳಲ್ಲಿ ಪ್ರಾಣಿಗಳ ಚಟುವಟಿಕೆಗಳಿಗೆ ಅಡ್ಡಿಯಾಗದಿರಲೆಂದು ಗದ್ದಲ ಇರುವುದು ಬೇಡ ಎಂದು ಬಿಟಿಆರ್ ಸಿಬ್ಬಂದಿಗಳು ಮನವಿ ಮಾಡಿದ್ದರು. ಶನಿವಾರ ರಾತ್ರಿ ಡ್ರಿಲ್ ನಡೆಯಲಿಲ್ಲ. ಇದು ಕಾರಣ ಪ್ರಧಾನಿ ಮೋದಿ ಅವರಿಗೆ ಕನಿಷ್ಟ 40 ಆನೆಗಳ ಹಿಂಡನ್ನು ಹಾಗೂ 20-30 ಗೌರ್‌ಗಳು, ಸುಮಾರು 30 ಸಾಂಬಾರ್ ಜಿಂಕೆಗಳು ಮತ್ತು ಇತರ ವನ್ಯಜೀವಿಗಳನ್ನು ನೋಡಲು ಸಾಧ್ಯವಾಯಿತು. ಆದರೆ ಸಫಾರಿಯ ಪ್ರಮುಖ ಉದ್ದೇಶವಾಗಿದ್ದ ಹುಲಿಗಳನ್ನು ನೋಡಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿ ವಿವರಿಸಿದ್ದಾರೆ.

ಇನ್ನು ಪ್ರಧಾನಿ ಮೋದಿ ಹುಲಿ ಕಾಣದ್ದಕ್ಕೆ ಬಿಟಿಆರ್ ಅಧಿಕಾರಿಗಳ ಬಳಿ ನಯವಾಗಿ ದೂರು ಹೇಳಿದ್ದಾರೆ. ಹೀಗೇಕೆ ಆಯಿತು ಎಂಬ ಕಾರಣ ನೀಡಿದಾಗ, ಪ್ರಧಾನಿ ಮೋದಿ ಭದ್ರತಾ ಸಿಬ್ಬಂದಿಗಳೆಡೆಗೆ ತಿರುಗಿ, ಅವರು ತಮ್ಮನ್ನು ಹುಲಿ ನೋಡುವುದರಿಂದ ವಂಚಿತರನ್ನಾಗಿಸಿದ್ದಾರೆ ಎಂದು ನೆನಪಿಸಿದ್ದನ್ನು ಬಿಟಿಆರ್ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಹಾಗೆಯೇ ಮೋದಿ ಸಫಾರಿಗೆ ತೆರಳಿದ್ದ ವಾಹನದ ನೋಂದಣಿಯನ್ನು ರದ್ದುಗೊಳಿಸುವ ಮಾಹಿತಿ ಸುಳ್ಳು, ವೈರಲ್ ಆಗುತ್ತಿರುವ ನಂಬರ್ ಪ್ಲೇಟ್ ನ ವಾಹನ ಹಳೆಯದ್ದಾಗಿದ್ದು ಅದು ಈಗ ಬಳಕೆಯಲ್ಲಿಯೇ ಇಲ್ಲ. ಹಾಗೆಯೇ ಚಾಲಕ ಮಧುಸೂಧನ್ ಅವರದ್ದೂ ತಪ್ಪಿಲ್ಲ. ಭದ್ರತೆಯ ಹೆಸರಿನಲ್ಲಿ ಸಫಾರಿ ಮಾರ್ಗದಲ್ಲಿ ಪದೇ ಪದೇ ವಾಹನಗಳು ಸಂಚರಿಸಿದ್ದರಿಂದ ಹುಲಿ ಕಂಡುಬಾರದೇ ಇರುವ ಸಾಧ್ಯತೆಗಳೂ ಇದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

2 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

9 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

11 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

18 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

20 hours ago