Advertisement
ಸುದ್ದಿಗಳು

ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ | ಕೃಷಿ ಸಚಿವ ಬಿ ಸಿ ಪಾಟೀಲ್‌ |

Share

ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿಯನ್ನು ಜಮಾ ಮಾಡಲಿದೆ. ಈ ಸಹಾಯಧನ ಪಡೆಯಲು ರೈತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಕೃಷಿ ಇಲಾಖೆ ಕಚೇರಿಗೆ ಅಲೆದಾಡಬೇಕಾಗಿಲ್ಲ, ಸರ್ಕಾರ ತನ್ನ ಬಳಿ ಲಭ್ಯವಿರುವ ಕಿಸಾನ್ ಸಮ್ಮಾನ್ ನಿಧಿ ದತ್ತಾಂಶ ಆಧರಿಸಿ ನೇರವಾಗಿ ರೈತರ ಖಾತೆಗೆ ಅನುದಾನ ಜಮಾ ಮಾಡಲಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್‌ ಹೇಳಿದ್ದಾರೆ.

ರೈತರಿಗೆ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯಧನ ನೀಡಲು ಸರ್ಕಾರ ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ. ಬಜೆಟ್ ನಲ್ಲಿ ಘೋಷಿಸಿದಂತೆ ‘ರೈತ ಶಕ್ತಿ ಯೋಜನೆ’ ಅಡಿ ಈ ಸಹಾಯಧನ ನೀಡಲಾಗುತ್ತದೆ. ಈಗಾಗಲೇ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕಾಗಿ ರಾಜ್ಯದ 53 ಲಕ್ಷ ರೈತರಿಂದ ದಾಖಲೆಗಳನ್ನು ಸಂಗ್ರಹಿಸಲಾಗಿದೆ, ಜಮೀನು ಪಹಣಿ, ಆಧಾರ್ ಜೋಡಣೆಯೂ ಆಗಿದೆ. ಇದರ ಆಧಾರದ ಮೇಲೆ 5 ಎಕರೆವರೆಗೆ ಜಮೀನು ಹೊಂದಿರುವ ಅರ್ಹ ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲಾಗುವುದು.

ಸಾಮಾನ್ಯವಾಗಿ ರೈತರಿಗೆ ಟ್ರ್ಯಾಕ್ಟರ್ ನಲ್ಲಿ ಒಂದು ಎಕರೆ ಭೂಮಿ ಉಳುಮೆ ಮಾಡಲು 20 ಲೀಟರ್ ಡೀಸೆಲ್ ಬೇಕಾಗುತ್ತದೆ. ಈ ಪೈಕಿ ತಲಾ ಲಿಟರಿಗೆ 25 ರೂ. ನಂತೆ 10 ಲೀಟರ್ ಗೆ 250 ರೂ. ಸಬ್ಸಿಡಿ ನೀಡಲಾಗುವುದು, 5 ಎಕರೆ ಭೂಮಿ ಹೊಂದಿದವರಿಗೆ ಗರಿಷ್ಠ 1,250 ರೂ. ಸಬ್ಸಿಡಿ ಕೊಡಲಾಗುತ್ತದೆ. ಇದಕ್ಕಾಗಿ ಸರ್ಕಾರ ಈಗಾಗಲೇ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಡೀಸೆಲ್ ದರ ದುಬಾರಿ ಆಗಿರುವುದರಿಂದ ಸಣ್ಣ ರೈತರು ಉಳುಮೆ ಮಾಡುವುದು ಕಷ್ಟವಾಗಿದೆ, ಸಾಕಷ್ಟು ಮಂದಿ ಉಳುಮೆ ಮಾಡುವುದನ್ನೇ ನಿಲ್ಲಿಸಿದ್ದಾರೆ. ಹೀಗಾಗಿ ಮತ್ತೆ ಉಳುಮೆ ಮಾಡಿ, ಕೃಷಿ ಬೆಳೆಗಳ ವ್ಯಾಪ್ತಿ ಹೆಚ್ಚಿಸುವುದರ ಜೊತೆಗೆ ಕೃಷಿ ಉತ್ಪನ್ನಗಳ ಪ್ರಮಾಣವೂ ಹೆಚ್ಚಾಗಲಿ. ಈ ಮೂಲಕ ರೈತರು ಮತ್ತು ರೈತ ಕುಟುಂಬಗಳು ಮತ್ತೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿ ಎಂದು  ಬಿ ಸಿ ಪಾಟೀಲ್‌ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

10 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago