Advertisement
ಸುದ್ದಿಗಳು

ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ | ಕೃಷಿ ಸಚಿವ ಬಿ ಸಿ ಪಾಟೀಲ್‌ |

Share

ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿಯನ್ನು ಜಮಾ ಮಾಡಲಿದೆ. ಈ ಸಹಾಯಧನ ಪಡೆಯಲು ರೈತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಕೃಷಿ ಇಲಾಖೆ ಕಚೇರಿಗೆ ಅಲೆದಾಡಬೇಕಾಗಿಲ್ಲ, ಸರ್ಕಾರ ತನ್ನ ಬಳಿ ಲಭ್ಯವಿರುವ ಕಿಸಾನ್ ಸಮ್ಮಾನ್ ನಿಧಿ ದತ್ತಾಂಶ ಆಧರಿಸಿ ನೇರವಾಗಿ ರೈತರ ಖಾತೆಗೆ ಅನುದಾನ ಜಮಾ ಮಾಡಲಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್‌ ಹೇಳಿದ್ದಾರೆ.

ರೈತರಿಗೆ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯಧನ ನೀಡಲು ಸರ್ಕಾರ ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ. ಬಜೆಟ್ ನಲ್ಲಿ ಘೋಷಿಸಿದಂತೆ ‘ರೈತ ಶಕ್ತಿ ಯೋಜನೆ’ ಅಡಿ ಈ ಸಹಾಯಧನ ನೀಡಲಾಗುತ್ತದೆ. ಈಗಾಗಲೇ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕಾಗಿ ರಾಜ್ಯದ 53 ಲಕ್ಷ ರೈತರಿಂದ ದಾಖಲೆಗಳನ್ನು ಸಂಗ್ರಹಿಸಲಾಗಿದೆ, ಜಮೀನು ಪಹಣಿ, ಆಧಾರ್ ಜೋಡಣೆಯೂ ಆಗಿದೆ. ಇದರ ಆಧಾರದ ಮೇಲೆ 5 ಎಕರೆವರೆಗೆ ಜಮೀನು ಹೊಂದಿರುವ ಅರ್ಹ ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲಾಗುವುದು.

ಸಾಮಾನ್ಯವಾಗಿ ರೈತರಿಗೆ ಟ್ರ್ಯಾಕ್ಟರ್ ನಲ್ಲಿ ಒಂದು ಎಕರೆ ಭೂಮಿ ಉಳುಮೆ ಮಾಡಲು 20 ಲೀಟರ್ ಡೀಸೆಲ್ ಬೇಕಾಗುತ್ತದೆ. ಈ ಪೈಕಿ ತಲಾ ಲಿಟರಿಗೆ 25 ರೂ. ನಂತೆ 10 ಲೀಟರ್ ಗೆ 250 ರೂ. ಸಬ್ಸಿಡಿ ನೀಡಲಾಗುವುದು, 5 ಎಕರೆ ಭೂಮಿ ಹೊಂದಿದವರಿಗೆ ಗರಿಷ್ಠ 1,250 ರೂ. ಸಬ್ಸಿಡಿ ಕೊಡಲಾಗುತ್ತದೆ. ಇದಕ್ಕಾಗಿ ಸರ್ಕಾರ ಈಗಾಗಲೇ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಡೀಸೆಲ್ ದರ ದುಬಾರಿ ಆಗಿರುವುದರಿಂದ ಸಣ್ಣ ರೈತರು ಉಳುಮೆ ಮಾಡುವುದು ಕಷ್ಟವಾಗಿದೆ, ಸಾಕಷ್ಟು ಮಂದಿ ಉಳುಮೆ ಮಾಡುವುದನ್ನೇ ನಿಲ್ಲಿಸಿದ್ದಾರೆ. ಹೀಗಾಗಿ ಮತ್ತೆ ಉಳುಮೆ ಮಾಡಿ, ಕೃಷಿ ಬೆಳೆಗಳ ವ್ಯಾಪ್ತಿ ಹೆಚ್ಚಿಸುವುದರ ಜೊತೆಗೆ ಕೃಷಿ ಉತ್ಪನ್ನಗಳ ಪ್ರಮಾಣವೂ ಹೆಚ್ಚಾಗಲಿ. ಈ ಮೂಲಕ ರೈತರು ಮತ್ತು ರೈತ ಕುಟುಂಬಗಳು ಮತ್ತೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿ ಎಂದು  ಬಿ ಸಿ ಪಾಟೀಲ್‌ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

20 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago