Advertisement
Opinion

ಮೂತ್ರದ ಹರಳಿಗೆ ಪಥ್ಯ : ಮೂತ್ರದ ಹರಳು-ಕಲ್ಲು ಇದ್ದವರಿಗೆ ಆಹಾರ ನಿಯಮಗಳು ಏನು..?

Share

ಮೂತ್ರಪಿಂಡದ ಕಲ್ಲುಗಳ( kidney stones) ಸಂದರ್ಭದಲ್ಲಿ ಸರಿಯಾದ ಆಹಾರವು(Food) ತುಂಬಾ ಮುಖ್ಯವಾಗಿದೆ. ತಪ್ಪಾದ ಆಹಾರ ಸೇವನೆಯಿಂದ ಮೂತ್ರದಲ್ಲಿ ಯೂರಿಕ್ ಆಸಿಡ್(Uric Acid), ಕ್ಯಾಲ್ಸಿಯಂನಂತಹ(Calcium) ಕ್ಷಾರೀಯ ಅಂಶಗಳ ಪ್ರಮಾಣ ಹೆಚ್ಚಾಗುವುದರಿಂದ ಮೂತ್ರಪಿಂಡದ ಕಲ್ಲುಗಳು ಉಂಟಾಗುತ್ತವೆ. ಕಿಡ್ನಿಯಲ್ಲಿ ಕಲ್ಲುಗಳಿದ್ದರೆ ಏನು ತಿನ್ನಬೇಕು ಮತ್ತು ಏನನ್ನು ತಿನ್ನಬಾರದು ಎಂದು ಇಂದು ತಿಳಿಯೋಣ…

ಮೂತ್ರಪಿಂಡದ ಕಲ್ಲುಗಳಿದ್ದಲ್ಲಿ ಏನು ತಿನ್ನಬೇಕು-(ಪಥ್ಯ): ನೀವು ಮೂತ್ರಪಿಂಡದ ಕಾಯಿಲೆ ಹೊಂದಿದ್ದರೆ, ದಿನವಿಡೀ ಸಾಕಷ್ಟು ನೀರು (ಅಗತ್ಯಕ್ಕೆ ಅನುಗುಣವಾಗಿ) ಕುಡಿಯಿರಿ, ಇದು ಮೂತ್ರನಾಳದ ಮೂಲಕ ದೇಹದಿಂದ ಹಾನಿಕಾರಕ ವಸ್ತುಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಎಳೆನೀರು, ಕಬ್ಬಿನ ರಸ, ಹುರುಳಿ ಕಷಾಯ, ಸೂಪ್ ಉಪಯುಕ್ತವಾಗಿದೆ. ನೀವು ಮೂತ್ರಪಿಂಡದ ಕಲ್ಲುಗಳನ್ನು ಹೊಂದಿದ್ದರೆ, ನಿಮ್ಮ ಆಹಾರದಲ್ಲಿ ಹೆಚ್ಚಿನ ಫೈಬರ್ ಇರಬೇಕು. ಇದಕ್ಕಾಗಿ ಹಸಿರು ಸೊಪ್ಪು, ವಿವಿಧ ಹಣ್ಣುಗಳನ್ನು ಸೇರಿಸಬೇಕು. ಆಹಾರದಲ್ಲಿ ಹಸಿರು ತರಕಾರಿಗಳು, ಹಸಿರು ಬೀನ್ಸ್, ಎಲೆಕೋಸು, ಮೂಲಂಗಿ, ಗಜ್ಜರಿ, ಈರುಳ್ಳಿ, ಒಳಗೊಂಡಿರಬೇಕು. ಬಾಳೆಹಣ್ಣು, ದಾಳಿಂಬೆ, ಕಲ್ಲಂಗಡಿ, ದ್ರಾಕ್ಷಿ, ಕಿತ್ತಳೆ, ನೇರಳೆ ಮುಂತಾದ ಹಣ್ಣುಗಳನ್ನು ಸೇವಿಸಿ. ಬಾಳೆಹಣ್ಣುಗಳು, ಕರಬೂಜುಗಳು ಮತ್ತು ದ್ರಾಕ್ಷಿಗಳು ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿವೆ, ಆದ್ದರಿಂದ ಅವು ಮೂತ್ರಪಿಂಡದ ಕಲ್ಲುಗಳಿಗೆ ವಿಶೇಷವಾಗಿ ಉಪಯುಕ್ತವಾಗಿವೆ. ದಾಳಿಂಬೆಯ ಉಪಯುಕ್ತ ಉತ್ಕರ್ಷಣ ನಿರೋಧಕಗಳು ದೇಹ ಮತ್ತು ಮೂತ್ರಪಿಂಡಗಳಿಂದ ಹಾನಿಕಾರಕ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

Advertisement

ಮೂತ್ರಪಿಂಡದ ಹರಳು ಇರುವವರು ಏನು ತಿನ್ನಬಾರದು? (ಅಪಥ್ಯ): ಅಧಿಕ ಪ್ರೋಟೀನ್ ಯುಕ್ತ ಆಹಾರಗಳು, ಉಪ್ಪಿನ ಆಹಾರಗಳು ಮತ್ತು ಕ್ಯಾಲ್ಸಿಯಂ ಆಕ್ಸಲೇಟ್ ಆಹಾರಗಳು ಮೂತ್ರಪಿಂಡದ ಕಲ್ಲುಗಳಿಗೆ ವೃದ್ಧಿಸಲು ಸಹಾಯಕವಾಗುತ್ತವೆ. ಇದು ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ಹೆಚ್ಚಿಸಬಹುದು. ಮೂತ್ರಪಿಂಡದ ಕಲ್ಲುಗಳಲ್ಲಿ ಕ್ಯಾಲ್ಸಿಯಂ ಆಕ್ಸಲೇಟ್ ಹೊಂದಿರುವ ಆಹಾರವನ್ನು ಸೇವಿಸುವುದನ್ನು ಕಡಿಮೆ ಮಾಡಬೇಕು. ಆಲೂಗಡ್ಡೆ, ಬೀಟ್ಗೆಡ್ಡೆಗಳು, ಚಾಕೊಲೇಟ್, ಒಣಗಿದ ಹಣ್ಣುಗಳು, ಪಾಲಕ, ಸ್ಟ್ರಾಬೆರಿಗಳು, ಚಹಾ ಮತ್ತು ಗೋಧಿ ಹೊಟ್ಟುಗಳಲ್ಲಿ ಆಕ್ಸಲೇಟ್ ಅಧಿಕವಾಗಿರುತ್ತದೆ. ಅಲ್ಲದೆ, ಮೂತ್ರಪಿಂಡದ ಕಲ್ಲುಗಳ ಸಂದರ್ಭದಲ್ಲಿ, ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಕಡಿಮೆ ಮಾಡಿ. ಅದರಲ್ಲೂ ಉಪ್ಪಿನ ಪದಾರ್ಥಗಳಾದ ಹಪ್ಪಳ, ಉಪ್ಪಿನಕಾಯಿ, ವೇಫರ್‌ಗಳನ್ನು ತಿನ್ನುವುದನ್ನು ತಪ್ಪಿಸಿ. ಮೂತ್ರದ ಉಪ್ಪು ಹೆಚ್ಚಿದ್ದರೆ ಕ್ಯಾಲ್ಸಿಯಂನ ಕಲ್ಲುಗಳು ಬರುವ ಸಾಧ್ಯತೆ ಹೆಚ್ಚು. ಟೊಮೆಟೊ ಬೀಜಗಳು, ಬದನೆಕಾಯಿ, ಬೆಂಡೆಕಾಯಿ, ಬಟಾಣಿ, ಹೂಕೋಸು, ಆಲೂಗಡ್ಡೆ, ಎಲೆಕೋಸು ತಿನ್ನುವುದನ್ನು ತಪ್ಪಿಸಿ. ಹಾಗೆಯೇ ತಂಪು ಪಾನೀಯಗಳನ್ನು ಕುಡಿಯುವುದನ್ನು ತಪ್ಪಿಸಿ. ಅಡಿಗೆ ಸೋಡಾ ಹೊಂದಿರುವ ಆಹಾರಗಳನ್ನು ಸಹ ತ್ಯಜಿಸಬೇಕು.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement

Proper diet is very important in case of kidney stones. Kidney stones are caused due to increase of alkaline elements like uric acid, calcium in urine due to wrong food intake. Today let’s know what to eat and what not to eat if you have kidney stones…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago