Advertisement
ಸುದ್ದಿಗಳು

ಬೆನ್ನು, ಮೊಣಕಾಲುಗಳನ್ನು ಬಲಪಡಿಸಲು ನೆರವಾಗುವ ಆಹಾರ ಕ್ರಮಗಳು

Share

ಇತ್ತೀಚಿಗೆ ಆರೋಗ್ಯದಲ್ಲಿ ಬರುವ ತೊಂದರೆಗಳಲ್ಲಿ ಮೊಣಕಾಲು ನೋವು, ಬೆನ್ನು ನೋವು ಕಾಣಿಸಿಕೊಳ್ಳುತ್ತಿತ್ತು. ಇಂದು ಎಲ್ಲ ವಯಸ್ಸಿನವರಲ್ಲೂ, ಕ್ರೀಡಾಪಟುಗಳಲ್ಲೂ ಮೂಳೆಗಳ ಸಮಸ್ಯೆ  ಕಾಣುತ್ತಿದೆ. ಮಹಿಳೆಯರಲ್ಲಿ ಹೆರಿಗೆ ನಂತರ ಇತಂಹ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಏಕೆಂದರೆ ಒಂದು ನಮಗುವಿನ ಜನ್ಮ ನೀಡಿದ ನಂತರ ಅವರಲ್ಲಿ ಕ್ಯಾಲ್ಸಿಯಂ ಕೊರತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಕಾರಣವೇನು ಎಂಬುದನ್ನು ನೋಡಿದರೆ ನಾವು ತೆಗೆದುಕೊಳ್ಳುವ ಆಹಾರದಲ್ಲಿ ಪ್ರೋಟೀನ್ ಕೊರತೆ.

ಎಲುಬುಗಳಿಗೆ ಬೇಕಾಗಿರುವ ಕ್ಯಾಲ್ಸಿಯಂ ಸಿಗದೇ ಹೋದರೆ ಒಂದಲ್ಲ ಒಂದು ಕೊರತೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಕೆಲವೊಂದು ಆಹಾರಗಳು ಮೊಣಕಾಲಿನ ಹಾಗೂ ಬೆನ್ನು ನೋವಿನ ಆರೋಗ್ಯ ಸುಧಾರಿಸಲು ನೆರವಾಗುತ್ತವೆ ಎನ್ನಲಾಗುತ್ತದೆ. ಅವುಗಳೆಂದರೆ:

ಮೀನು: ಬಂಗುಡೆ, ಭೂತಾಯಿಯಂತಹ ಕೊಬ್ಬಿನ ಮೀನುಗಳಲ್ಲಿ ಒಮೆಗಾ-3, ಕೊಬ್ಬಿನಾಮ್ಲಗಳು, ವಿಟಮಿನ್ ಡಿ ಸಮೃದ್ಧವಾಗಿದೆ. ಇದು ಉರಿಯೂತ ತಗ್ಗಿಸಲು, ಎಲುಬಿನ ಮೂಳೆಗಳನ್ನು ಬಲಪಡಿಸಲು ಸಹಾಕರಿಸುತ್ತದೆ.

ಹಸಿರೆಲೆ ತರಕಾರಿಗಳು: ಪಾಲಕ್, ಬ್ರೊಕೊಲಿಯಂತಹ ಹಸಿರೆಲೆ ತರಕಾರಿಗಳು ಕೂಡಾ ಉತ್ತಮವಾಗಿವೆ. ಇವುಗಳಲ್ಲಿ ಕ್ಯಾಲ್ಸಿಯಂ, ವಿಟಮಿನ್ ಕೆ, ಆಂಟಿಆಕ್ಸಿಡೆಂಟ್ಗಳಿದ್ದು, ಇವುಗಳು ಮೂಳೆಗಳಿಗೆ ಅಗತ್ಯ ಪೋಷಕಾಂಶಗಳಾಗಿವೆ.

ಡ್ರೈ ಪ್ರೂಟ್ಸ್: ನಟ್ಸ್ ಮತ್ತು ಬೀಜಗಳು ( ಅಗಸೆ ಬೀಜ, ಕುಂಬಳಕಾಯಿ,ಚಿಯಾ) ಇತ್ಯಾದಿಗಳಲ್ಲಿ ಒಮೆಗಾ-3 ಸೇರಿದಂತೆ ಆರೋಗ್ಯಕರ ಕೊಬ್ಬು, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಆಂಟಿಆಕ್ಸಿಡೆಂಟ್ಗಳನ್ನು ಪೂರೈಸಿ ಮೂಳೆ, ಕೀಲುಗಳ ಆರೋಗ್ಯ ಬೆಂಬಲಿಸಲು ನೆರವಾಗುತ್ತದೆ.

ಹಣ್ಣುಗಳು: ಹಣ್ಣುಗಳ ಸೇವನೆಯೂ ಉತ್ತಮ ಆರೋಗ್ಯ ಹೇಳಿಮಾಡಿಸಿದ್ದು, ಅದರಲ್ಲೂ ಕೀವಿ ಹಣ್ಣು, ಕಿತ್ತಳೆಗಳ ಸೇವನೆ ಅತೀ ಉತ್ತಮ ಏಕೆಂದರೆ ಇದರಲ್ಲಿ ವಿಟಮಿನ್ ಸಿ, ಆಂಟಿಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಇದು ಕ್ಯಾಲ್ಸಿಯಂ ನೀಡಲು ಸಹಾಕಾರಿಸುತ್ತದೆ.

ದ್ವಿದಳ ದಾನ್ಯಗಳು: ಬೀನ್ಸ್, ಮಸೂರ, ಸೋಯಾ ಉತ್ಪನ್ನಗಳು ಕ್ಯಾಲ್ಸಿಯಂ ಪ್ರೋಟೀನ್, ಪೈಬರ್, ಮೆಗ್ನೀಸಿಯಮ್, ಸತುಗಳಂತಹ ಖನಿಜಗಳನ್ನು ಒದಗಿಸುತ್ತದೆ. ಇವೆಲ್ಲಾ ಮೂಳೆಗಳ ಆರೋಗ್ಯ ಬಲಪಡಿಸಲು ಸಹಾಯ ಮಾಡುತ್ತದೆ.

ಸೂಪ್‌ಗಳು: ಕಾಲಜನ್-ಭರಿತ ಸೂಪ್ ಗಳು ಮತ್ತು ಸ್ಟಾಕ್ ಗಳಂತಹ ಮೂಳೆಗಳನ್ನು ಕುದಿಸುವ ಮೂಲಕ ತಯಾರಿಸಲಾದ ಮೂಳೆ ಗಳನ್ನು ಕುದಿಸುವ ಮೂಲಕ ತಯಾರಿಸಲಾದ ಮೂಳೆ ಸಾರು, ಅಮೈನೋ ಆಮ್ಲಗಳು, ಕಾಲಜನ್, ಜೆಲಾಟಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇವೆಲ್ಲಾ ಮೂಳೆಗಳನ್ನು ಬಲಪಡಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

33 minutes ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

14 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

14 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

23 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

24 hours ago