Advertisement
ಸುದ್ದಿಗಳು

ಬೆನ್ನು, ಮೊಣಕಾಲುಗಳನ್ನು ಬಲಪಡಿಸಲು ನೆರವಾಗುವ ಆಹಾರ ಕ್ರಮಗಳು

Share

ಇತ್ತೀಚಿಗೆ ಆರೋಗ್ಯದಲ್ಲಿ ಬರುವ ತೊಂದರೆಗಳಲ್ಲಿ ಮೊಣಕಾಲು ನೋವು, ಬೆನ್ನು ನೋವು ಕಾಣಿಸಿಕೊಳ್ಳುತ್ತಿತ್ತು. ಇಂದು ಎಲ್ಲ ವಯಸ್ಸಿನವರಲ್ಲೂ, ಕ್ರೀಡಾಪಟುಗಳಲ್ಲೂ ಮೂಳೆಗಳ ಸಮಸ್ಯೆ  ಕಾಣುತ್ತಿದೆ. ಮಹಿಳೆಯರಲ್ಲಿ ಹೆರಿಗೆ ನಂತರ ಇತಂಹ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಏಕೆಂದರೆ ಒಂದು ನಮಗುವಿನ ಜನ್ಮ ನೀಡಿದ ನಂತರ ಅವರಲ್ಲಿ ಕ್ಯಾಲ್ಸಿಯಂ ಕೊರತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಕಾರಣವೇನು ಎಂಬುದನ್ನು ನೋಡಿದರೆ ನಾವು ತೆಗೆದುಕೊಳ್ಳುವ ಆಹಾರದಲ್ಲಿ ಪ್ರೋಟೀನ್ ಕೊರತೆ.

ಎಲುಬುಗಳಿಗೆ ಬೇಕಾಗಿರುವ ಕ್ಯಾಲ್ಸಿಯಂ ಸಿಗದೇ ಹೋದರೆ ಒಂದಲ್ಲ ಒಂದು ಕೊರತೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಕೆಲವೊಂದು ಆಹಾರಗಳು ಮೊಣಕಾಲಿನ ಹಾಗೂ ಬೆನ್ನು ನೋವಿನ ಆರೋಗ್ಯ ಸುಧಾರಿಸಲು ನೆರವಾಗುತ್ತವೆ ಎನ್ನಲಾಗುತ್ತದೆ. ಅವುಗಳೆಂದರೆ:

ಮೀನು: ಬಂಗುಡೆ, ಭೂತಾಯಿಯಂತಹ ಕೊಬ್ಬಿನ ಮೀನುಗಳಲ್ಲಿ ಒಮೆಗಾ-3, ಕೊಬ್ಬಿನಾಮ್ಲಗಳು, ವಿಟಮಿನ್ ಡಿ ಸಮೃದ್ಧವಾಗಿದೆ. ಇದು ಉರಿಯೂತ ತಗ್ಗಿಸಲು, ಎಲುಬಿನ ಮೂಳೆಗಳನ್ನು ಬಲಪಡಿಸಲು ಸಹಾಕರಿಸುತ್ತದೆ.

ಹಸಿರೆಲೆ ತರಕಾರಿಗಳು: ಪಾಲಕ್, ಬ್ರೊಕೊಲಿಯಂತಹ ಹಸಿರೆಲೆ ತರಕಾರಿಗಳು ಕೂಡಾ ಉತ್ತಮವಾಗಿವೆ. ಇವುಗಳಲ್ಲಿ ಕ್ಯಾಲ್ಸಿಯಂ, ವಿಟಮಿನ್ ಕೆ, ಆಂಟಿಆಕ್ಸಿಡೆಂಟ್ಗಳಿದ್ದು, ಇವುಗಳು ಮೂಳೆಗಳಿಗೆ ಅಗತ್ಯ ಪೋಷಕಾಂಶಗಳಾಗಿವೆ.

ಡ್ರೈ ಪ್ರೂಟ್ಸ್: ನಟ್ಸ್ ಮತ್ತು ಬೀಜಗಳು ( ಅಗಸೆ ಬೀಜ, ಕುಂಬಳಕಾಯಿ,ಚಿಯಾ) ಇತ್ಯಾದಿಗಳಲ್ಲಿ ಒಮೆಗಾ-3 ಸೇರಿದಂತೆ ಆರೋಗ್ಯಕರ ಕೊಬ್ಬು, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಆಂಟಿಆಕ್ಸಿಡೆಂಟ್ಗಳನ್ನು ಪೂರೈಸಿ ಮೂಳೆ, ಕೀಲುಗಳ ಆರೋಗ್ಯ ಬೆಂಬಲಿಸಲು ನೆರವಾಗುತ್ತದೆ.

ಹಣ್ಣುಗಳು: ಹಣ್ಣುಗಳ ಸೇವನೆಯೂ ಉತ್ತಮ ಆರೋಗ್ಯ ಹೇಳಿಮಾಡಿಸಿದ್ದು, ಅದರಲ್ಲೂ ಕೀವಿ ಹಣ್ಣು, ಕಿತ್ತಳೆಗಳ ಸೇವನೆ ಅತೀ ಉತ್ತಮ ಏಕೆಂದರೆ ಇದರಲ್ಲಿ ವಿಟಮಿನ್ ಸಿ, ಆಂಟಿಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಇದು ಕ್ಯಾಲ್ಸಿಯಂ ನೀಡಲು ಸಹಾಕಾರಿಸುತ್ತದೆ.

ದ್ವಿದಳ ದಾನ್ಯಗಳು: ಬೀನ್ಸ್, ಮಸೂರ, ಸೋಯಾ ಉತ್ಪನ್ನಗಳು ಕ್ಯಾಲ್ಸಿಯಂ ಪ್ರೋಟೀನ್, ಪೈಬರ್, ಮೆಗ್ನೀಸಿಯಮ್, ಸತುಗಳಂತಹ ಖನಿಜಗಳನ್ನು ಒದಗಿಸುತ್ತದೆ. ಇವೆಲ್ಲಾ ಮೂಳೆಗಳ ಆರೋಗ್ಯ ಬಲಪಡಿಸಲು ಸಹಾಯ ಮಾಡುತ್ತದೆ.

ಸೂಪ್‌ಗಳು: ಕಾಲಜನ್-ಭರಿತ ಸೂಪ್ ಗಳು ಮತ್ತು ಸ್ಟಾಕ್ ಗಳಂತಹ ಮೂಳೆಗಳನ್ನು ಕುದಿಸುವ ಮೂಲಕ ತಯಾರಿಸಲಾದ ಮೂಳೆ ಗಳನ್ನು ಕುದಿಸುವ ಮೂಲಕ ತಯಾರಿಸಲಾದ ಮೂಳೆ ಸಾರು, ಅಮೈನೋ ಆಮ್ಲಗಳು, ಕಾಲಜನ್, ಜೆಲಾಟಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇವೆಲ್ಲಾ ಮೂಳೆಗಳನ್ನು ಬಲಪಡಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

2 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

2 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

3 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

3 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

3 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

12 hours ago