Advertisement
ಸುದ್ದಿಗಳು

ಬೆನ್ನು, ಮೊಣಕಾಲುಗಳನ್ನು ಬಲಪಡಿಸಲು ನೆರವಾಗುವ ಆಹಾರ ಕ್ರಮಗಳು

Share

ಇತ್ತೀಚಿಗೆ ಆರೋಗ್ಯದಲ್ಲಿ ಬರುವ ತೊಂದರೆಗಳಲ್ಲಿ ಮೊಣಕಾಲು ನೋವು, ಬೆನ್ನು ನೋವು ಕಾಣಿಸಿಕೊಳ್ಳುತ್ತಿತ್ತು. ಇಂದು ಎಲ್ಲ ವಯಸ್ಸಿನವರಲ್ಲೂ, ಕ್ರೀಡಾಪಟುಗಳಲ್ಲೂ ಮೂಳೆಗಳ ಸಮಸ್ಯೆ  ಕಾಣುತ್ತಿದೆ. ಮಹಿಳೆಯರಲ್ಲಿ ಹೆರಿಗೆ ನಂತರ ಇತಂಹ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಏಕೆಂದರೆ ಒಂದು ನಮಗುವಿನ ಜನ್ಮ ನೀಡಿದ ನಂತರ ಅವರಲ್ಲಿ ಕ್ಯಾಲ್ಸಿಯಂ ಕೊರತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಕಾರಣವೇನು ಎಂಬುದನ್ನು ನೋಡಿದರೆ ನಾವು ತೆಗೆದುಕೊಳ್ಳುವ ಆಹಾರದಲ್ಲಿ ಪ್ರೋಟೀನ್ ಕೊರತೆ.

ಎಲುಬುಗಳಿಗೆ ಬೇಕಾಗಿರುವ ಕ್ಯಾಲ್ಸಿಯಂ ಸಿಗದೇ ಹೋದರೆ ಒಂದಲ್ಲ ಒಂದು ಕೊರತೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಕೆಲವೊಂದು ಆಹಾರಗಳು ಮೊಣಕಾಲಿನ ಹಾಗೂ ಬೆನ್ನು ನೋವಿನ ಆರೋಗ್ಯ ಸುಧಾರಿಸಲು ನೆರವಾಗುತ್ತವೆ ಎನ್ನಲಾಗುತ್ತದೆ. ಅವುಗಳೆಂದರೆ:

ಮೀನು: ಬಂಗುಡೆ, ಭೂತಾಯಿಯಂತಹ ಕೊಬ್ಬಿನ ಮೀನುಗಳಲ್ಲಿ ಒಮೆಗಾ-3, ಕೊಬ್ಬಿನಾಮ್ಲಗಳು, ವಿಟಮಿನ್ ಡಿ ಸಮೃದ್ಧವಾಗಿದೆ. ಇದು ಉರಿಯೂತ ತಗ್ಗಿಸಲು, ಎಲುಬಿನ ಮೂಳೆಗಳನ್ನು ಬಲಪಡಿಸಲು ಸಹಾಕರಿಸುತ್ತದೆ.

ಹಸಿರೆಲೆ ತರಕಾರಿಗಳು: ಪಾಲಕ್, ಬ್ರೊಕೊಲಿಯಂತಹ ಹಸಿರೆಲೆ ತರಕಾರಿಗಳು ಕೂಡಾ ಉತ್ತಮವಾಗಿವೆ. ಇವುಗಳಲ್ಲಿ ಕ್ಯಾಲ್ಸಿಯಂ, ವಿಟಮಿನ್ ಕೆ, ಆಂಟಿಆಕ್ಸಿಡೆಂಟ್ಗಳಿದ್ದು, ಇವುಗಳು ಮೂಳೆಗಳಿಗೆ ಅಗತ್ಯ ಪೋಷಕಾಂಶಗಳಾಗಿವೆ.

ಡ್ರೈ ಪ್ರೂಟ್ಸ್: ನಟ್ಸ್ ಮತ್ತು ಬೀಜಗಳು ( ಅಗಸೆ ಬೀಜ, ಕುಂಬಳಕಾಯಿ,ಚಿಯಾ) ಇತ್ಯಾದಿಗಳಲ್ಲಿ ಒಮೆಗಾ-3 ಸೇರಿದಂತೆ ಆರೋಗ್ಯಕರ ಕೊಬ್ಬು, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಆಂಟಿಆಕ್ಸಿಡೆಂಟ್ಗಳನ್ನು ಪೂರೈಸಿ ಮೂಳೆ, ಕೀಲುಗಳ ಆರೋಗ್ಯ ಬೆಂಬಲಿಸಲು ನೆರವಾಗುತ್ತದೆ.

ಹಣ್ಣುಗಳು: ಹಣ್ಣುಗಳ ಸೇವನೆಯೂ ಉತ್ತಮ ಆರೋಗ್ಯ ಹೇಳಿಮಾಡಿಸಿದ್ದು, ಅದರಲ್ಲೂ ಕೀವಿ ಹಣ್ಣು, ಕಿತ್ತಳೆಗಳ ಸೇವನೆ ಅತೀ ಉತ್ತಮ ಏಕೆಂದರೆ ಇದರಲ್ಲಿ ವಿಟಮಿನ್ ಸಿ, ಆಂಟಿಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಇದು ಕ್ಯಾಲ್ಸಿಯಂ ನೀಡಲು ಸಹಾಕಾರಿಸುತ್ತದೆ.

ದ್ವಿದಳ ದಾನ್ಯಗಳು: ಬೀನ್ಸ್, ಮಸೂರ, ಸೋಯಾ ಉತ್ಪನ್ನಗಳು ಕ್ಯಾಲ್ಸಿಯಂ ಪ್ರೋಟೀನ್, ಪೈಬರ್, ಮೆಗ್ನೀಸಿಯಮ್, ಸತುಗಳಂತಹ ಖನಿಜಗಳನ್ನು ಒದಗಿಸುತ್ತದೆ. ಇವೆಲ್ಲಾ ಮೂಳೆಗಳ ಆರೋಗ್ಯ ಬಲಪಡಿಸಲು ಸಹಾಯ ಮಾಡುತ್ತದೆ.

ಸೂಪ್‌ಗಳು: ಕಾಲಜನ್-ಭರಿತ ಸೂಪ್ ಗಳು ಮತ್ತು ಸ್ಟಾಕ್ ಗಳಂತಹ ಮೂಳೆಗಳನ್ನು ಕುದಿಸುವ ಮೂಲಕ ತಯಾರಿಸಲಾದ ಮೂಳೆ ಗಳನ್ನು ಕುದಿಸುವ ಮೂಲಕ ತಯಾರಿಸಲಾದ ಮೂಳೆ ಸಾರು, ಅಮೈನೋ ಆಮ್ಲಗಳು, ಕಾಲಜನ್, ಜೆಲಾಟಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇವೆಲ್ಲಾ ಮೂಳೆಗಳನ್ನು ಬಲಪಡಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

23 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

24 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago