ನಿಗಮ ಮಂಡಳಿಗಳಿಗೆ ರಾಜ್ಯ ಸರ್ಕಾರದಿಂದ ಅಧ್ಯಕ್ಷರ ನೇಮಕ | ಮೀನುಗಾರಿಕಾ ಅಭಿವೃದ್ದಿ ನಿಗಮದ ಬಗ್ಗೆ ಚರ್ಚೆ | ಅಸಮಾಧಾನ ಹೊರಹಾಕಿದ ಆಡಿಯೋ ವೈರಲ್‌ |

July 25, 2022
11:35 PM

ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಮಾಡಿತ್ತು. ಇದೀಗ  20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಇದರಲ್ಲಿ ಈಗ ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷರ ಆಯ್ಕೆ ಬಗ್ಗೆ ಅಸಮಾಧಾನಗಳು ಕೇಳಿಬಂದಿದೆ. ಈ ಬಗ್ಗೆ ಆಡಿಯೋ ವೈರಲ್‌ ಆಗಿದೆ.

Advertisement

20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ, ಇದರಂತೆ ಆಯ್ಕೆಯಾದವರ ಪಟ್ಟಿ ಇಲ್ಲಿದೆ.

  • ಗುತ್ತಿಗನೂರು ವಿ, ಗೌಡ-ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ದಿ ನಿಗಮ
  • ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ-ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ
  • ಚಂಗಾವರ ಮಾರಣ್ಣ-ಕಾಡುಗೊಲ್ಲ ಅಭಿವೃದ್ದಿ ನಿಗಮ
  • ದೇವೇಂದ್ರನಾಥ ಕೆ ನಾದ್‌-ಅಲೆಮಾರಿ/ಅರೆ ಅಲೆ ಮಾರಿ ಅಭಿವೃದ್ದಿ ನಿಗಮ
  • ಕೆ.ಪಿ ವೆಂಕಟೇಶ್‌-ಕರ್ನಾಟಕ ಸಪಾಯಿ ಕರ್ಮಚಾರಿ ಅಭಿವೃದ್ದಿ ನಿಗಮ
  • ಧರ್ಮಣ್ಣ ದೊಡ್ಡಮನಿ- ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ
  • ರಘು ಕೌಟಿಲ್ಯ- ಮೈಸೂರು ಪೇಂಟ್ಸ್‌ ಅಂಡ್‌ ವಾರ್ನಿಶ್‌
  • ಕೊಲ್ಲಾ ಶೇಶಗಿರಿ ರಾವು-ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ, ತುಂಗ ಭದ್ರ ಯೋಜನೆ ಮುನಿರಬಾದ್‌
  • ಜಿ.ನಿಜಗುಣರಾಜು-ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ, ಕಾವೇರಿ ಜಲಾಯನ ಪ್ರದೇಶ ಮೈಸೂರು
  • ಎಂ ಸರವಣ-ಅಲ್ಪಸಂಖ್ಯಾತರ ನಿಗಮ
  • ಕೆ.ವಿ ನಾಗರಾಜ್‌- ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
  • ಮಾರುತಿ-ಕರಕುಶಲ ಅಭಿವೃದ್ದಿ ನಿಗಮ
  • ಎಂ ಎಸ್‌ ಕರಿಗೌಡ್ರ- ಮಾರ್ಕೆಟಿಂಗ್‌ ಕಮ್ಯೂನಿಕೇಶನ್‌ ಅಂಡ್‌ ಅಡ್ವಟ್ರೈಸಿಂಗ್‌ ಲಿಮಿಟೆಡ್‌
  • ಎ.ವಿ ತೀರ್ಥರಾಮ- ಮೀನುಗಾರಿಕೆ ಅಭಿವೃದ್ದಿ ನಿಗಮ
  • ಎನ್‌.ಎಂ ರವಿ ಕಾಳಪ್ಪ-ಕರ್ನಾಟಕ ಜೈವಿಕ ವೈವಿದ್ಯ ಮಂಡಳಿ

ಇದೀಗ ಮೀನುಗಾರಿಕೆ ಅಭಿವೃದ್ದಿ ನಿಗಮ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯಾಗಿದ್ದು ಮೊಗವೀರ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪ ಕೇಳಿಬಂದಿದೆ.ಈ ಬಗ್ಗೆ ಮೀನಗಾರಿಕಾ ಸಚಿವರಿಗೆ ಬಿಜೆಪಿ ಕಾರ್ಯಕರ್ತ ಎನ್ನಲಾದ ವ್ಯಕ್ತಿಯೊಬ್ಬರು ದೂರವಾಣಿ ಕರೆ ಮಾಡಿ ವಿಚಾರಿಸಿ ಅಸಮಾಧಾನ ವ್ಯಕ್ತಪಡಿಸಿರುವ ಆಡಿಯೋ ವೈರಲ್‌ ಆಗಿದೆ.ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಇದ್ದಾಗಲೂ ಮೀನುಗಾರರಿಗೆ ನ್ಯಾಯ ಸಿಕ್ಕಿತ್ತು.ಆದರೆ ಬಿಜೆಪಿ ಪರವಾಗಿ ನಿಂತಿದ್ದ ಮೊಗವೀರರಿಗೆ ಅನ್ಯಾಯ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ
August 17, 2025
2:33 PM
by: ಸಾಯಿಶೇಖರ್ ಕರಿಕಳ
ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ
August 17, 2025
6:52 AM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
August 17, 2025
6:49 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?
August 16, 2025
3:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group