Advertisement
ಸುದ್ದಿಗಳು

#Tomato | ಮಾರುಕಟ್ಟೆಗೆ ಬಂದಿದೆ ಬಣ್ಣ ಬಣ್ಣದ ತರಹೇವಾರಿ ಟೊಮೆಟೊ ಹಣ್ಣು…! | ಕೆಂಪು ಟೊಮೆಟೋಗಿಂತ ಸಿಕ್ಕಾಪಟ್ಟೆ ಡಿಮ್ಯಾಂಡ್‌ ಇದಕ್ಕೆ…! |

Share

ಟೊಮೆಟೋ ಬೆಲೆ ಗಗನಕ್ಕೇರಿ ಕುಳಿತಿದೆ. ದಿನದ ಸಾಂಬಾರಿಗೂ ಒಂದು ಟೊಮೆಟೋ #Tomato ಹಾಕಲು ಹಿಂದೆ ಮುಂದೆ ನೋಡುವಂತಾಗಿದೆ. ಅಂತದ್ದರಲ್ಲಿ ಮಾರುಕಟ್ಟೆಗೆ ಕಪ್ಪು ಟೊಮೆಟೋ, ಚಾಕಲೇಟ್ ಟೊಮೆಟೋ, ಹೀಗೆ ತರತರದ ಟೊಮೆಟೋ ಬಂದ್ರೆ ಅದನ್ನು ಕೊಳ್ಳುವವರಾರೋ..?. ಆದರೆ ಕೆಂಪು ಟೊಮೆಟೊ ಕೃಷಿ ಕೆಲವೊಮ್ಮೆ ಲಾಭ ನೀಡಿದ್ರೆ, ಇನ್ನೂ ಕೆಲವೊಮ್ಮೆ ಭೀಕರ ನಷ್ಟ ತರುತ್ತದೆ. ರೇಟ್‌ ಕಡಿಮೆಯಾದ್ರೆ ರೈತರು ಟೊಮೆಟೊಗಳನ್ನು ರಸ್ತೆಗೆ ಎಸೆದು ಬಿಡ್ತಾರೆ. ದಿನಬಳಕೆಯ ಕೆಂಪು ಟೊಮೆಟೋ ಪರಿಸ್ಥಿತಿ ಹೀಗಿರುವಾಗ ಈ ಕಪ್ಪು ಟೊಮೆಟೊ, ಚಾಕಲೇಟ್ ಟೊಮೆಟೋ ಕೊಳ್ಳುವವರಾರು ಅನ್ನೋದೆ ಪ್ರಶ್ನೆ. ಆದರೆ ಇದಕ್ಕೆ ಭಾರಿ ಬೇಡಿಕೆ ಇದೆಯಂತೆ, ಬೆಳೆದರೆ ಯಾವಾಗಲೂ ಲಾಭವನ್ನೇ ತಂದುಕೊಡುತ್ತೆ ಅಂತೆ…!

 ಈ ಚಾಕೊಲೇಟ್ ಟೊಮ್ಯಾಟೊಗಳು ಕಾಯಿ ಇದ್ದಾಗ ಹಸಿರು ಬಣ್ಣದಲ್ಲಿ ಕಾಣುತ್ತವೆ. ಆದರೆ ಮಾಗಿದಾಗ ಚಾಕೊಲೇಟ್ ಬಣ್ಣಕ್ಕೆ ತಿರುಗುತ್ತವೆ. ಪಶ್ಷಿಮ ಬಂಗಾಳದ ಮುಸ್ತಫಾನಗರದ ದಂಪತಿ ಪ್ರಥಮ ಬಾರಿಗೆ ಈ ಚಾಕಲೇಟ್ ಟೊಮ್ಯಾಟೊ ಕೃಷಿ ಮಾಡಿ ಮಾರಾಟಕ್ಕೆ ಇಟ್ಟಿದ್ದಾರೆ.  ಚಾಕೋಲೇಟ್ ಟೊಮ್ಯಾಟೊ ಬೀಜವನ್ನು ಒಮ್ಮೆ ಬಿತ್ತಿದರೆ 4-5 ತಿಂಗಳಿಗೆ ಉತ್ತಮ ಬೆಳೆಯನ್ನು ಪಡೆಯಬಹುದು. ಫೆಬ್ರವರಿ-ಮಾರ್ಚ್ ಅವಧಿಯಲ್ಲಿ ಈ ಟೊಮ್ಯಾಟೊ ಬೀಜಗಳನ್ನು ಬಿತ್ತಿದರೆ, ಜೂನ್-ಜುಲೈನಲ್ಲಿ ಟೊಮ್ಯಾಟೊಗಳು ಕಟಾವಿಗೆ ಬರುತ್ತವೆ.

ಈ ಟೊಮ್ಯಾಟೊದಿಂದ ಚಟ್ನಿಯನ್ನು ತಯಾರಿಸಲಾಗುತ್ತದೆ. ಇವು ಇತರ ಟೊಮ್ಯಾಟೊಗಳಂತೆ ಹುಳಿಯಾಗಿರುವುದಿಲ್ಲ, ಆದರೆ ಸಿಹಿಯಾಗಿರುತ್ತವೆ. ಹಾಗಾಗಿ ತಿನ್ನಲು ತುಂಬಾ ರುಚಿಕರವಾಗಿವಾಹಿರುತ್ತದೆ.ಈ ಟೊಮ್ಯಾಟೊಗಳನ್ನು ಮಾರುಕಟ್ಟೆಯಲ್ಲಿ ಕೆಜಿಗೆ 80 ರೂಪಾಯಿವರೆಗೆ ಮಾರಾಟ ಮಾಡಲಾಗುತ್ತದೆ. ಈ ಟೊಮ್ಯಾಟೊಗಳು ಮೂಲತಃ ಸೋಲಾನಮ್ ಲೈಕೋಪರ್ಸಿಕಮ್ ಜಾತಿಯಿಂದ ಬಂದವು. ಇವು ಕಾಯಿಯಾಗಿದ್ದಾಗ ಹಸಿರು ಮತ್ತು ಮಾಗಿದಾಗ ಚಾಕೊಲೇಟ್ ಬಣ್ಣವನ್ನು ಹೊಂದಿರುತ್ತವೆ. ಈ ಟೊಮೆಟೊ ಪ್ರಭೇದವು ಪಶ್ಚಿಮ ದಕ್ಷಿಣ ಅಮೆರಿಕಾ ಮತ್ತು ಮಧ್ಯ ಅಮೆರಿಕಕ್ಕೆ ಸ್ಥಳೀಯವಾಗಿದೆ. ಇದರ ಬಣ್ಣ ಚಾಕೊಲೇಟ್‌ನಂತೆ ಮತ್ತು ಅದರ ರುಚಿ ಚಾಕೊಲೇಟ್‌ನಂತೆಯೇ ಇರುತ್ತದೆ.

(ಕೃಪೆ: ಅಂತರ್ಜಾಲ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

4 minutes ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

11 minutes ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

9 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

11 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

20 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

24 hours ago