Advertisement
MIRROR FOCUS

ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂಪಾಯಿ | ಉದ್ಯೋಗಿಗಳಿಗೆ 17,500 ರೂ. ಉಳಿತಾಯ | ಮೊದಲ ಉದ್ಯೋಗ ಪಡೆದವರಿಗೆ 15 ಸಾವಿರ ರೂ |

Share

ಬಜೆಟ್‌(Budjet) ಅಂದ ಮೇಲೆ ರೈತರಿಗೆ ಅನೇಕ ನಿರೀಕ್ಷೆಗಳು ಇರುತ್ತವೆ. ಹೊಸ ಯೋಜನೆಗಳು. ಇರುವ ಯೋಜನೆಗಳಲ್ಲಿ ಅನುಕೂಲಕರ ಬದಲಾವಣೆಗಳನ್ನು ದೇಶದ ರೈತರು(Farmers) ನೀರೀಕ್ಷಿಸುತ್ತಿರುತ್ತಾರೆ. ಅದೇ ರೀತಿಯಲ್ಲಿ ಇಂದು ಮಂಡಿಸಿದ ಬಜೆಟ್‌ನಲ್ಲಿ  ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ಲೋಕಸಭೆಯಲ್ಲಿ (Lok Sabha) ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ (Budget Speech) ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳೋದಾಗಿ ಹೇಳಿದ ಅವರು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಹೇಳಿದರು.

ಉದ್ಯೋಗಿಗಳಿಗೆ 17,500 ರೂ. ಉಳಿತಾಯ – ಮೊದಲು ತೆರಿಗೆ ಎಷ್ಟಿತ್ತು? : ತೆರಿಗೆ ಪಾವತಿದಾರರಿಗೆ (Salaried Class) ಬಜೆಟ್‌ನಲ್ಲಿ ಆಶಾಭಾವನೆ ವ್ಯಕ್ತವಾಗಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಸಂಬಳ ಪಡೆಯುವ ಉದ್ಯೋಗಿಗಳು ವರ್ಷಕ್ಕೆ 17,500 ರೂ. ಆದಾಯ ತೆರಿಗೆ ಉಳಿತಾಯ ಮಾಡಬಹುದು. ಸಂಬಳ ಪಡೆಯುವ ಉದ್ಯೋಗಿಗಳಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್ 50,000 ರೂ. ನಿಂದ 75,000 ರೂ.ಗೆ ಹೆಚ್ಚಳ ಮಾಡಲಾಗಿದೆ.

ಎಷ್ಟು ತೆರಿಗೆ?
0-3 ಲಕ್ಷ ರೂ. ವರೆಗೆ ಯಾವುದೇ ತೆರಿಗೆ ಇಲ್ಲ (ಯಾವುದೇ ಬದಲಾವಣೆ ಇಲ್ಲ)
3-7 ಲಕ್ಷ ರೂ. ವರೆಗೆ 5% (ಮೊದಲು 3-6 ಲಕ್ಷ ರೂ. ಗೆ 5% ಇತ್ತು)
7-10 ಲಕ್ಷ ರೂ. ವರೆಗೆ 10 % (ಮೊದಲು 6-9 ಲಕ್ಷ ರೂ. 10% ಇತ್ತು)
10-12 ಲಕ್ಷ ರೂ. ವರೆಗೆ 15% ( ಮೊದಲು 9-12 ಲಕ್ಷ ರೂ. 15% ಇತ್ತು)
12-15 ಲಕ್ಷ ರೂ. ವರೆಗೆ 20% (ಯಾವುದೇ ಬದಲಾವಣೆ ಇಲ್ಲ)
15 ಲಕ್ಷ ರೂ. ಗಿಂತ ಮೇಲ್ಪಟ್ಟು 30% (ಯಾವುದೇ ಬದಲಾವಣೆ ಇಲ್ಲ)

ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. : ಲೋಕಸಭಾ ಚುನಾವಣೆಯಲ್ಲಿ (Lok Sabha Election) ನಿರುದ್ಯೋಗ (Unemployment) ಸಮಸ್ಯೆ ದೊಡ್ಡ ಸದ್ದು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ತನ್ನ ಬಜೆಟ್‌ನಲ್ಲಿ ಪ್ರಕಟಿಸಿದೆ. ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. ವೇತನ ನೀಡಲಾಗುವುದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದಲ್ಲಿ (Budget Speech) ನಿರ್ಮಲಾ ಸೀತಾರಾಮನ್‌, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯ ಭಾಗವಾಗಿ, ಔಪಚಾರಿಕ ವಲಯ ಮತ್ತು ಉತ್ಪಾದನಾ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಪಡೆದ ಎಲ್ಲರಿಗೂ ಸರ್ಕಾರ ಒಂದು ತಿಂಗಳ ವೇತನವನ್ನು ನೀಡಲಿದೆ ಎಂದು ಹೇಳಿದರು.

ಒಂದು ತಿಂಗಳ ಸಂಬಳದ ನೇರ ಲಾಭ ವರ್ಗಾವಣೆ (DBT) ಮೂಲಕ 15,000 ರೂ. ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ತಿಂಗಳಿಗೆ ಗರಿಷ್ಟ 1 ಲಕ್ಷ ರೂ. ಸಂಬಳ ಪಡೆಯುವ ಉದ್ಯೋಗಿಗಳು ಈ ಯೋಜನೆಯ ಲಾಭ ಪಡೆಯಬಹುದು. ಈ ಪ್ರಯೋಜನಗಳನ್ನು ಪಡೆಯಲು ಉದ್ಯೋಗಿಗಳು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ನೋಂದಾಯಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ. ಈ ಯೋಜನೆಯಿಂದ ಸುಮಾರು 2.10 ಹೊಸ ಉದ್ಯೋಗಿಗಳಿಗೆ ಲಾಭ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

3 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

6 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

7 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

8 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

20 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

23 hours ago