ದಾವಣಗೆರೆ ಜಿಲ್ಲೆಯ 216 ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಡಿಜಿಟಲ್ ಇಂಡಿಯಾ ಮುಂದುವರೆದ ಭಾಗವಾಗಿ ಡಿಜಿಟಲ್ ಲೈಬ್ರರಿಗಳ ಅನುಷ್ಠಾನದಿಂದ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಿದ್ದು, ಅವರಿಗೆ ಕಂಪ್ಯೂಟರ್ ಜ್ಞಾನಾರ್ಜನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಗ್ರಾಮೀಣ ಭಾಗದ ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಹೆಚ್ಚಳ ಮಾಡುವ ಸಲುವಾಗಿ, ಡಿಜಿಟಲ್ ಲೈಬ್ರರಿ ಆರಂಭಿಸಿದ್ದು, ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳನ್ನು ಮೂರು ತಂಡಗಳನ್ನಾಗಿ ವಿಂಗಡಿಸಿ ತರಬೇತಿ ನೀಡಲಾಗುತ್ತಿದೆ. ಅನೇಕ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುತ್ತಿದೆ ಎನ್ನುತ್ತಾರೆ ದಾವಣಗೆರೆ ಜಿಲ್ಲೆಯ ಮಾಯಕೊಂಡ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್.
ಉಚಿತವಾಗಿ ಡಿಜಿಟಲ್ ಲೈಬ್ರರಿ ಬಳಕೆ ಮಾಡುತ್ತಿದ್ದು, ಟೈಪಿಂಗ್, ಇ-ಮೇಲ್ , ಎಕ್ಸೆಲ್ ನಂತಹ ಬೇಸಿಕ್ ಕಂಪ್ಯೂಟರ್ ಜ್ಞಾನ ಕಲಿಯುತ್ತಿದ್ದೇವೆ. ಶಾಲೆ ಮುಗಿದ ಬಳಿಕ ಗ್ರಂಥಾಲಯಕ್ಕೆ ತೆರಳಿ, ಅಂತರ್ಜಾಲದಲ್ಲಿನ ಶೈಕ್ಷಣಿಕ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ ಎಂದು ಗ್ರಾಮೀಣ ಭಾಗದ ವಿದ್ಯಾರ್ಥಿ ವಿದ್ಯಾರ್ಥಿ ರೋಹನ್ ಹೇಳುತ್ತಾರೆ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…