ದಾವಣಗೆರೆ ಜಿಲ್ಲೆಯ 216 ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಡಿಜಿಟಲ್ ಇಂಡಿಯಾ ಮುಂದುವರೆದ ಭಾಗವಾಗಿ ಡಿಜಿಟಲ್ ಲೈಬ್ರರಿಗಳ ಅನುಷ್ಠಾನದಿಂದ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಿದ್ದು, ಅವರಿಗೆ ಕಂಪ್ಯೂಟರ್ ಜ್ಞಾನಾರ್ಜನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಗ್ರಾಮೀಣ ಭಾಗದ ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಹೆಚ್ಚಳ ಮಾಡುವ ಸಲುವಾಗಿ, ಡಿಜಿಟಲ್ ಲೈಬ್ರರಿ ಆರಂಭಿಸಿದ್ದು, ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳನ್ನು ಮೂರು ತಂಡಗಳನ್ನಾಗಿ ವಿಂಗಡಿಸಿ ತರಬೇತಿ ನೀಡಲಾಗುತ್ತಿದೆ. ಅನೇಕ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುತ್ತಿದೆ ಎನ್ನುತ್ತಾರೆ ದಾವಣಗೆರೆ ಜಿಲ್ಲೆಯ ಮಾಯಕೊಂಡ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್.
ಉಚಿತವಾಗಿ ಡಿಜಿಟಲ್ ಲೈಬ್ರರಿ ಬಳಕೆ ಮಾಡುತ್ತಿದ್ದು, ಟೈಪಿಂಗ್, ಇ-ಮೇಲ್ , ಎಕ್ಸೆಲ್ ನಂತಹ ಬೇಸಿಕ್ ಕಂಪ್ಯೂಟರ್ ಜ್ಞಾನ ಕಲಿಯುತ್ತಿದ್ದೇವೆ. ಶಾಲೆ ಮುಗಿದ ಬಳಿಕ ಗ್ರಂಥಾಲಯಕ್ಕೆ ತೆರಳಿ, ಅಂತರ್ಜಾಲದಲ್ಲಿನ ಶೈಕ್ಷಣಿಕ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ ಎಂದು ಗ್ರಾಮೀಣ ಭಾಗದ ವಿದ್ಯಾರ್ಥಿ ವಿದ್ಯಾರ್ಥಿ ರೋಹನ್ ಹೇಳುತ್ತಾರೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…