ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ | ಮಂಗಳೂರಿನಲ್ಲಿ ಆಯೋಜನೆ

November 8, 2024
7:02 AM

ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.

ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.

ಡಿಜಿಟಲ್ ಜೀವನ ಪ್ರಮಾಣ ಪತ್ರ  ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ  ಎಂದು ಫಲಾನುಭವಿಗಳು ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಭವಿಷ್ಯ ಈ ತೀರ್ಪಿನಲ್ಲಿದೆಯೇ..? ಗುಟ್ಕಾ ಬೇರೆ, ಅಡಿಕೆ ಬೇರೆ ? ಸುಪ್ರೀಂ ಕೋರ್ಟ್ ಮುಂದೆ ಇರುವ ದೊಡ್ಡ ಪ್ರಶ್ನೆಗಳು..
August 20, 2026
3:57 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ
August 20, 2026
3:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ
August 20, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror