ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.
ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.
ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ ಎಂದು ಫಲಾನುಭವಿಗಳು ಹೇಳುತ್ತಾರೆ.
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…
ವಿದ್ಯುತ್ ಸರಬರಾಜು ಕಂಪನಿಗಳಿಗೆ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …