ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.
ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.
ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ ಎಂದು ಫಲಾನುಭವಿಗಳು ಹೇಳುತ್ತಾರೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…