ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.
ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.
ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ ಎಂದು ಫಲಾನುಭವಿಗಳು ಹೇಳುತ್ತಾರೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…