ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.
ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.
ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ ಎಂದು ಫಲಾನುಭವಿಗಳು ಹೇಳುತ್ತಾರೆ.
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…