ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.
ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.
ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ ಎಂದು ಫಲಾನುಭವಿಗಳು ಹೇಳುತ್ತಾರೆ.
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…