Advertisement
ರಾಜ್ಯ

ಮಂಗಳೂರು| ಚಿಣ್ಣರ ಕೈಯಲ್ಲಿ ಡಿಜಿಟಲ್ ಸ್ಲೇಟ್: ಮನೆಮಾತಾದ ಇ-ಸ್ಲೇಟ್ ಅಭಿಯಾನ

Share

ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್‌ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.

ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್‌ ಅಭಿಯಾನವು ವೈರಲ್‌ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.

ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್‌ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್‌ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

5 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

5 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

6 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

7 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

20 hours ago